ಕರ್ನಾಟಕ

karnataka

ETV Bharat / state

ಮಂಗಳೂರಿನ ಅಡ್ಯಾರ್​ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ - ಮಂಗಳೂರು ಪೊಲೀಸ್​ ಠಾಣೆ

ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ..

ಮಂಗಳೂರಿನ ಅಡ್ಯಾರ್​ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ
ಮಂಗಳೂರಿನ ಅಡ್ಯಾರ್​ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

By

Published : May 28, 2021, 7:10 PM IST

Updated : May 28, 2021, 9:32 PM IST

ಮಂಗಳೂರು: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್​ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವನಪ್ಪಿದ್ದು,ಓರ್ವ ಗಾಯಗೊಂಡಿದ್ದಾರೆ.

ಪುದು ಗ್ರಾಮದ ಉನೈಸ್ (27) ಮತ್ತು ದಾವೂದ್ (22) ಮೃತರು. ಇನ್ನೋರ್ವ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳೂರಿನಿಂದ ಫರಂಗಿಪೇಟೆಗೆ ಹೋಗುತ್ತಿದ್ದ ಓಮ್ನಿ ಕಾರು ಅಡ್ಯಾರ್ ಬಳಿ ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಮಂಗಳೂರಿನ ಧಕ್ಕೆಯಲ್ಲಿ ಒಣಮೀನು ವ್ಯಾಪಾರಿಗಳಾಗಿರುವ ಮೂವರು ಓಮ್ನಿಯಲ್ಲಿದ್ದು, ಕೆಲಸ ಮುಗಿಸಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಗಾಯಗೊಂಡಿದ್ದ ಮೂವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಓಮ್ನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಫುಟ್​ಪಾತ್​ ಮೇಲೆ ಶವವಿರಿಸಿ ಹೋಗಿದ್ದ ಆ್ಯಂಬುಲೆನ್ಸ್ ಚಾಲಕ ಬಂಧನ

Last Updated : May 28, 2021, 9:32 PM IST

ABOUT THE AUTHOR

...view details