ಮಂಗಳೂರು: ಅಪ್ರಾಪ್ತೆಯೊಬ್ಬಳನ್ನ ಅಪಹರಣ ಮಾಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ನಿವಾಸಿ ಪರಶುರಾಮ (26) ಬಂಧಿತ ಆರೋಪಿ. ಆರೋಪಿಯು ಫೆ.14ರ ಸಂಜೆ ಶಾಲೆಯಿಂದ ಮನೆಗೆ ಬಂದಿರುವ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾನೆ. ಇದನ್ನು ಆಸುಪಾಸಿನ ಜನರು ಗಮನಿಸಿದ್ದರು. ಈ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ ಪುತ್ರಿ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಲಾಗಿದೆ ಎಂದು ದೂರು ನೀಡಿದ್ದರು.