ಕರ್ನಾಟಕ

karnataka

ಮಂಗಳೂರಲ್ಲಿ ಅಪ್ರಾಪ್ತೆ ಅಪಹರಣ: ಬಾಗಲಕೋಟೆಯಲ್ಲಿ ಆರೋಪಿ ಬಂಧನ

By

Published : Feb 22, 2020, 11:46 PM IST

ಅಪ್ರಾಪ್ತೆಯೊಬ್ಬಳನ್ನು ಅಪಹರಣ ಮಾಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Accused arrested who kidnaped minor girl
ಮಂಗಳೂರಿನಲ್ಲಿ ಅಪ್ರಾಪ್ತೆಯ ಅಪಹರಣ

ಮಂಗಳೂರು: ಅಪ್ರಾಪ್ತೆಯೊಬ್ಬಳನ್ನ ಅಪಹರಣ ಮಾಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ನಿವಾಸಿ ಪರಶುರಾಮ (26) ಬಂಧಿತ ಆರೋಪಿ. ಆರೋಪಿಯು ಫೆ.14ರ ಸಂಜೆ ಶಾಲೆಯಿಂದ ಮನೆಗೆ ಬಂದಿರುವ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾನೆ. ಇದನ್ನು ಆಸುಪಾಸಿನ ಜನರು ಗಮನಿಸಿದ್ದರು. ಈ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ ಪುತ್ರಿ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಲಾಗಿದೆ ಎಂದು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಾಗಲಕೋಟೆಯಲ್ಲಿ ಬಂಧಿಸಿ, ಬಾಲಕಿಯನ್ನು ಕರೆದುಕೊಂಡು ಬಂದಿದ್ದಾರೆ.

ಬಾಲಕಿಯ ಕುಟುಂಬದವರು ಮತ್ತು ಅಪಹರಣ ಮಾಡಿರುವ ಆರೋಪಿ ಪರಶುರಾಮ ಮೂಲತಃ ಬಾಗಲಕೋಟೆಯವರಾಗಿದ್ದಾರೆ. ಮಂಗಳೂರಿಗೆ ಕೂಲಿ ಕೆಲಸಕ್ಕಾಗಿ ಬಂದವರಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ABOUT THE AUTHOR

...view details