ಕರ್ನಾಟಕ

karnataka

ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ!

By

Published : Apr 19, 2023, 9:47 PM IST

ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ‌ ಬೆಳ್ಳಾರೆ ಪುತ್ತೂರು ಕ್ಷೇತ್ರದ ಎಸ್​​ಡಿಪಿಐ ಅಭ್ಯರ್ಥಿಯಾಗಿ ಜೈಲಿನಿಂದ ನಾಮಪತ್ರ ಸಲ್ಲಿಸಿದ್ದಾರೆ.

accused-in-praveen-nettaru-murder-case-filed-nomination-form-from-jail
ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ

ಮಂಗಳೂರು:ದೇಶದಾದ್ಯಂತ ಸಂಚಲನ ಸೃಷ್ಟಿಸಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ‌ ಬೆಳ್ಳಾರೆ (ಇಸ್ಮಾಯಿಲ್ ಕೆ.ಶಫಿ) ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದಾರೆ. ಪುತ್ತೂರು ಕ್ಷೇತ್ರದ ಎಸ್​​ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ) ಪಕ್ಷದ ಅಭ್ಯರ್ಥಿಯಾಗಿ ಇವರು ಕಣಕ್ಕಿಳಿದಿದ್ದಾರೆ.

ಶಾಫಿ ಬೆಳ್ಳಾರೆ ಅವರನ್ನು ಎನ್​ಐಎ ಬಂಧಿಸಿತ್ತು. ಇದೀಗ ಜೈಲಿನಲ್ಲಿದ್ದು, ಅಲ್ಲಿಂದಲೇ ನಾಮಪತ್ರ ಸಲ್ಲಿಸಿದ್ದಾರೆ. ಇವರನ್ನು ಪುತ್ತೂರು ಕ್ಷೇತ್ರದ ಅಭ್ಯರ್ಥಿಯಾಗಿ ಮಾಡಲಾಗುವುದು ಎಂದು ಪಕ್ಷದ ಮುಖಂಡ ಅಬ್ದುಲ್ ಮಜೀದ್ ಕೆಲವು ತಿಂಗಳ ಹಿಂದೆ ಹೇಳಿಕೆ ನೀಡಿದ್ದರು. ಇದು ಭಾರಿ ಚರ್ಚೆಗೆ ಕಾರಣವಾಗಿತ್ತು. ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂಬ ಆಗ್ರಹ ಕೇಳಿಬಂದಿತ್ತು. ಶಾಫಿ ಬೆಳ್ಳಾರೆ ಈ ಹಿಂದೆ ದಕ್ಷಿಣ ಕನ್ನಡ, ಉಡುಪಿ ದ್ವಿಸದಸ್ಯ ಕ್ಷೇತ್ರದಲ್ಲಿ ವಿಧಾನ ಪರಿಷತ್​​ಗೆ ಪಕ್ಷದ ಅಭ್ಯರ್ಥಿಯಾಗಿ ‌ಸ್ಪರ್ಧಿಸಿದ್ದರು.

ಶಾಫಿ ಬೆಳ್ಳಾರೆ ಪರವಾಗಿ ಇಂದು ಪುತ್ತೂರು ಕ್ಷೇತ್ರದ ಚುನಾವಣಾಧಿಕಾರಿಗೆ ಎಲೆಕ್ಷನ್ ಏಜೆಂಟ್ ಅಬ್ದುಲ್ ರಹಿಮಾನ್ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮುಂಚೆ ಎಪಿಎಂಸಿ ರಸ್ತೆಯಲ್ಲಿ ಇರುವ ಎಸ್​​​ಡಿಪಿಐ ಕಚೇರಿಯಿಂದ ತಾಲ್ಲೂಕು ಆಡಳಿತ ಸೌಧವರೆಗೆ ಕಾಲ್ನಡಿಗೆ ಮೆರವಣಿಗೆ ನಡೆಯಿತು.

ಇದನ್ನೂ ಓದಿ:ಕಾಂಗ್ರೆಸ್​​​ನ ಐದನೇ ಪಟ್ಟಿ ಪ್ರಕಟ; ಇನ್ನೂ ಐದು ಕ್ಷೇತ್ರಗಳಿಗೆ ಫೈನಲ್​ ಆಗದ ಟಿಕೆಟ್​​

ABOUT THE AUTHOR

...view details