ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಡೆಂಗ್ಯು ಹಾವಳಿ: ವೆನ್ಲಾಕ್​​ ಆಸ್ಪತ್ರೆಯಲ್ಲಿ ವಿಶೇಷ ಆರೈಕೆ ಕೇಂದ್ರ - undefined

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯು ಜ್ವರದ ಬಾಧೆಯು ವ್ಯಾಪಿಸುತ್ತಿದ್ದು, ಜನರಲ್ಲಿಯೂ ಆತಂಕ ಎದುರಾಗುತ್ತಿದೆ. ದಿನವೊಂದಕ್ಕೆ 25-30 ಶಂಕಿತ ಡೆಂಗ್ಯು ಪ್ರಕರಣಗಳು ವರದಿಯಾಗುತ್ತಿವೆ.

ಡಾ.ರಾಜೇಶ್ವರಿ

By

Published : Jul 25, 2019, 5:24 AM IST

Updated : Jul 25, 2019, 9:50 AM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯು ಜ್ವರದ ಬಾಧೆಯು ವ್ಯಾಪಿಸುತ್ತಿದ್ದು, ಜನರಲ್ಲಿ ಆತಂಕ ಎದುರಾಗುತ್ತಿದೆ. ದಿನವೊಂದಕ್ಕೆ 25-30 ಶಂಕಿತ ಡೆಂಗ್ಯು ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆ ಇದರ ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದುಡಾ. ರಾಜೇಶ್ವರಿ ದೇವಿ ಮಾಹಿತಿ ನೀಡಿದ್ದಾರೆ.

ದಿನದಿಂದ ದಿನಕ್ಕೆ ಈ ರೋಗದ ಪ್ರಕರಣಗಳು ಹೆಚ್ಚಾಗುತ್ತಿವೆ. ಮಂಗಳೂರು ನಗರದ ಗುಜ್ಜರಕೆರೆ ವ್ಯಾಪ್ತಿಯ ಗೋರಕ್ಷದಂಡು, ಅರೆಕೆರೆಬೈಲು, ಜಲಜಮ್ಮ ಕಂಪೌಂಡ್, ಅಲೆಮಾನ್ ಕಂಪೌಂಡ್, ಮುಳಿಹಿತ್ಲು, ಅಂಬಾನಗರ, ಹೊಯಿಗೆ ಬಜಾರ್, ಜಪ್ಪು ಮಾರುಕಟ್ಟೆ ವ್ಯಾಪ್ತಿಯಲ್ಲಿ ಅನೇಕ ಮಂದಿ ಡೆಂಗ್ಯುವಿನಿಂದ ಬಳಲುತ್ತಿದ್ದಾರೆ .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯು ಜ್ವರದ ಬಾಧೆ

ಇಲ್ಲಿನ ಸುಮಾರು 250ಕ್ಕೂ ಅಧಿಕ ಮಂದಿಗೆ ಡೆಂಗ್ಯು ಕಾಣಿಸಿಕೊಂಡಿದ್ದು, ಹಲವರು ಗುಣಮುಖರಾಗಿದ್ದಾರೆ. ಈ ಪ್ರದೇಶಗಳಲ್ಲದೆ ಮಂಗಳೂರಿನ ಬಲ್ಮಠ, ಕೊಡಿಯಾಲಬೈಲು, ಕದ್ರಿ, ವೆಲೆನ್ಸಿಯಾ, ಮಣ್ಣಗುಡ್ಡ ಸಹಿತ ವಿವಿಧ ಭಾಗಗಳಲ್ಲಿ ಡೆಂಗ್ಯು ಕಾಣಿಸಿಕೊಂಡಿದೆ. ಜಿಲ್ಲೆಯ ಇತರ ತಾಲೂಕುಗಳಾದ ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ಈ ಪ್ರದೇಶಗಳಲ್ಲಿಯೂ ಜನರಲ್ಲಿ ಡೆಂಗ್ಯು ಜ್ವರದ ಭೀತಿ ಎದುರಾಗಿದೆ. ಇದರಲ್ಲಿ 3 ವರ್ಷದ ಮಗುವಿನಿಂದ ಹಿಡಿದು 59 ವರ್ಷದ ವಯಸ್ಸಿನವರೂ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೆನ್ಲಾಕ್​ ಆಸ್ಪತ್ರೆಯಲ್ಲಿ ಇಲ್ಲಿಯವರೆಗೆ ಯಾರೂ ಡೆಂಗ್ಯು ರೋಗದಿಂದ ಮೃತರಾಗಿಲ್ಲ‌. ಬಹಳಷ್ಟು ಮಂದಿ ಕಾಯಿಲೆಯಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಪ್ರಸ್ತುತ 13 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರೂ ಗುಣಮುಖರಾಗುತ್ತಿದ್ದಾರೆ ಎಂದುಡಾ. ರಾಜೇಶ್ವರಿ ದೇವಿ ಹೇಳಿದರು.

Last Updated : Jul 25, 2019, 9:50 AM IST

For All Latest Updates

TAGGED:

ABOUT THE AUTHOR

...view details