ಮಂಗಳೂರು:ಮಂಗಳೂರು ಮಹಾನಗರ ಪಾಲಿಕೆಗೆ ಶೀಘ್ರದಲ್ಲೇ ಚುನಾವಣೆ ನಡೆಯುವ ಮುನ್ಸೂಚನೆ ಸಿಕ್ಕಿದ್ದು, ನ್ಯಾಯಾಲಯ ನವೆಂಬರ್ 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ಬರಬೇಕೆಂದು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಪಾಲಿಕೆಯಲ್ಲಿ ಚುನಾವಣಾ ಕಾವು ಆರಂಭವಾಗಿದೆ.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಈ ಹಿಂದಿದ್ದ ಜನಪ್ರತಿನಿಧಿಗಳ ಆಡಳಿತ ಮುಗಿದು 5 ತಿಂಗಳು ಕಳೆದಿದೆ. ಜನಪ್ರತಿನಿಧಿಗಳ ಅಧಿಕಾರವಿಲ್ಲದೆ ಜನರು ತೊಂದರೆಗೆ ಸಿಲುಕಿದ್ದರು. ಈ ಬಗ್ಗೆ ಮಂಗಳೂರಿನ ಅಬ್ದುಲ್ ಫಾರೂಕ್ ಮತ್ತಿತರು ಹೈಕೋರ್ಟ್ಗೆ ಪಿಐಎಲ್ ಹಾಕಿ ನ್ಯಾಯಾಲಯದ ಗಮನ ಸೆಳೆದಿದ್ದರು. ಈ ಅರ್ಜಿ ಸ್ವೀಕರಿಸಿ ವಿಚಾರಣೆ ನಡೆಸಿದ ಹೈಕೋರ್ಟ್ ದ್ವಿಸದಸ್ಯ ಪೀಠ ಚುನಾವಣಾ ಪ್ರಕ್ರಿಯೆ ಪೂರ್ಣಗೊಳಿಸಿ ನ. 15 ರೊಳಗೆ ಹೊಸ ಆಡಳಿತ ವ್ಯವಸ್ಥೆ ಜಾರಿಗೆ ತರಲು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.