ಕರ್ನಾಟಕ

karnataka

ETV Bharat / state

ಕಾರವಾರ: ಧ್ವಜಾರೋಹಣದ‌ ಬಳಿಕ ಹೃದಯಾಘಾತದಿಂದ ASI ಸಾವು - ಧ್ವಜಾರೋಹಣದ ಬಳಿಕ ಎಎಸ್​ಐ ಸಾವು

ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಧ್ವಜಾರೋಹಣದ ಕೆಲ ಸಮಯದ ಬಳಿಕ ಎಎಸ್​ಐ ಮಹ್ಮದ್​ ಶೇಖ್​ ಅವರಲ್ಲಿ ಎದೆನೋವು ಕಾಣಿಸಿಕೊಂಡು ಅಲ್ಲಿಯೇ ಕುಸಿದುಬಿದ್ದಿದ್ದರು.

asi-dies-heart-attack
ಎಎಸ್ಐ ಮೃತ

By

Published : Jan 26, 2022, 3:48 PM IST

Updated : Jan 26, 2022, 3:59 PM IST

ಕಾರವಾರ(ಉತ್ತರ ಕನ್ನಡ):ಗಣರಾಜ್ಯೋತ್ಸವಧ್ವಜಾರೋಹಣದಲ್ಲಿ ಭಾಗಿಯಾದ ಬಳಿಕ ಇಲ್ಲಿನ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಾರವಾರದಲ್ಲಿ ಇಂದು ನಡೆದಿದೆ.

ನಗರದ ಸಂಚಾರಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತ ಅಧಿಕಾರಿ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಧ್ವಜಾರೋಹಣದ ಕೆಲ ಸಮಯದ ಬಳಿಕ ಎಎಸ್​ಐ ಮಹ್ಮದ್​ ಶೇಖ್​ ಅವರಲ್ಲಿ ಎದೆನೋವು ಕಾಣಿಸಿಕೊಂಡು ಠಾಣೆಯಲ್ಲಿಯೇ ಕುಸಿದುಬಿದ್ದಿದ್ದಾರೆ.

ತಕ್ಷಣ ಅವರನ್ನು ಮೆಡಿಕಲ್ ಕಾಲೇಜಿಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಬ್ದುಲ್ ಖಾದರ್ ಮಹ್ಮದ್ ಶೇಖ್ 1992 ರಲ್ಲಿ ಪೊಲೀಸ್ ಕಾನಸ್ಟೇಬಲ್ ಆಗಿ ಪೊಲೀಸ್ ಇಲಾಖೆಯಲ್ಲಿ ಭರ್ತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ, ದಾಂಡೇಲಿ ಗ್ರಾಮೀಣ, ದಾಂಡೇಲಿ ನಗರ, ಜೊಯಿಡಾ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

7 ಜುಲೈ 2019 ರಲ್ಲಿ ಎಎಸ್ಐ ಆಗಿ ಪದೋನ್ನತಿ ಹೊಂದಿದ್ದರು. ಮೃತರಿಗೆ ಹೆಂಡತಿ ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ. ಮೃತರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನಾ ಡಿ. ಪೆನ್ನೆಕರ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:15 ವರ್ಷ ಅಪಘಾತ ರಹಿತ ಮತ್ತು ಅಪರಾಧ ರಹಿತ ನಿರಂತರ ಸೇವೆಗಾಗಿ ಚಿನ್ನದ ಪದಕ ಪಡೆದ ಸಾರಿಗೆ ಚಾಲಕರು..

Last Updated : Jan 26, 2022, 3:59 PM IST

ABOUT THE AUTHOR

...view details