ಮಂಗಳೂರು:ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೂಡುಬಿದಿರೆ ತಾಲೂಕು ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹೆಚ್ಚುವರಿ 66 ಸಾವಿರ ರೂ. ನಗದು ಪತ್ತೆಯಾಗಿದೆ.
ಮೂಡುಬಿದಿರೆ ತಾಲೂಕು ಕಚೇರಿ ಮೇಲೆ ಎಸಿಬಿ ಅಧಿಕಾರಿಗಳಿಂದ ದಿಢೀರ್ ದಾಳಿ
ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮೂಡುಬಿದಿರೆ ತಾಲೂಕು ಕಚೇರಿ ಮೇಲೆ ದಾಳಿ ನಡೆಸಿ ಹೆಚ್ಚುವರಿ 66 ಸಾವಿರ ರೂ. ನಗದು ಪತ್ತೆ ಮಾಡಿದ್ದಾರೆ.
ನಾಗರಿಕರೊಬ್ಬರು ಈ ಬಗ್ಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಉಡುಪಿ, ಕಾರವಾರ ಹಾಗೂ ಚಿಕ್ಕಮಗಳೂರು ವಿಭಾಗಗಳ ಪೊಲೀಸ್ ನಿರೀಕ್ಷಕರು, ಹೆಡ್ ಕಾನ್ಸ್ಟೇಬಲ್ಗಳು, ಕಾನ್ಸ್ಟೇಬಲ್ಗಳು ದಾಳಿ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಚೇರಿಯ ಸರ್ವೇ ವಿಭಾಗ, ಜನಸ್ನೇಹಿ ವಿಭಾಗ, ಅಟಲ್ ಜೀ ವಿಭಾಗ ಹಾಗೂ ಉಪ ತಹಶೀಲ್ದಾರರ ಕಚೇರಿ ಪರಿಶೀಲನೆ ನಡೆಸಿ, ತಾಲೂಕು ಕಚೇರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿ ಎಂಟು ಮಂದಿಯನ್ನು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
ಇನ್ನು ಇಲ್ಲಿ ಸಿಕ್ಕ 66 ಸಾವಿರ ರೂ. ಹೆಚ್ಚುವರಿ ನಗದಿಗೆ ಯಾವುದೇ ದಾಖಲೆಗಳು ಇಲ್ಲದಿದ್ದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.