ಕರ್ನಾಟಕ

karnataka

ETV Bharat / state

ಬಂಟ್ವಾಳದಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಮೂವರು ಆರೋಪಿಗಳ ಬಂಧನ

ಬುಧವಾರ ರಾತ್ರಿ ಫರಂಗಿಪೇಟೆಯ ಸ್ಟುಡಿಯೋ ಮಾಲೀಕ ಹಾಗೂ ಬಿಜೆಪಿ ಕಾರ್ಯಕರ್ತ ದಿನೇಶ್ ಕೊಟ್ಟಿಂಜ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ದಸ್ತಗಿರಿ ಮಾಡಿದ್ದಾರೆ.

By

Published : Oct 29, 2020, 9:05 AM IST

dsd
ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬುಧವಾರ ರಾತ್ರಿ ಫರಂಗಿಪೇಟೆಯ ತೃಷಾ ಸ್ಟುಡಿಯೋ ಮಾಲೀಕ ದಿನೇಶ್ ಕೊಟ್ಟಿಂಜ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದ ಮೇಲೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಅಮ್ಮೆಮ್ಮಾರು ನಿವಾಸಿ ಮಹಮ್ಮದ್ ಅರ್ಷದ್(19), ಅಬ್ದುಲ್ ರೆಹಮಾನ್(22) ಹಾಗೂ ಮಹಮ್ಮದ್ ಸೈಪುದ್ದೀನ್(22) ಬಂಧಿತ ಆರೋಪಿಗಳು. ಮತ್ತೊಬ್ಬ ಆರೋಪಿ ಸವಾದ್​ ಬಂಧನಕ್ಕಾಗಿ ಬಲೆ ಬೀಸಲಾಗಿದೆ.

ಬುಧವಾರ ರಾತ್ರಿ 7.15ಕ್ಕೆ ಪುದು ಗ್ರಾಮದ ದಿನೇಶ್ ಅವರ ಫೋಟೋ ಸ್ಟುಡಿಯೋಗೆ 4 ಜನ ಯುವಕರು ಫೋಟೋ ತೆಗೆಸಿಕೊಳ್ಳಲು ಬಂದು ಕತ್ತಿಯಿಂದ ತಲೆ, ಬಲಗೈ ಹಾಗೂ ಎಡ ಕಿಬ್ಬೊಟ್ಟೆಗೆ ಹಲ್ಲೆ ನಡೆಸಿದ್ದರು. ಈಗ ಮೂವರು ಆರೋಪಿಗಳನ್ನು 12 ತಾಸಿನೊಳಗೆ ಬಂಟ್ವಾಳ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ABOUT THE AUTHOR

...view details