ಕರ್ನಾಟಕ

karnataka

By

Published : Oct 16, 2019, 11:41 PM IST

ETV Bharat / state

ಗರ್ಭಿಣಿ ಸಿಬ್ಬಂದಿಗೆ ಠಾಣೆಯಲ್ಲೇ ಸೀಮಂತ: ಮಂಗಳೂರಿನಲ್ಲಿ ಅಪರೂಪದ ಘಟನೆ!

ಮಂಗಳೂರು ಜಿಲ್ಲೆಯ ಪೂರ್ವ (ಕದ್ರಿ) ಠಾಣೆಯ ಪೊಲೀಸರು ಗರ್ಭಿಣಿ ಪೊಲೀಸ್ ಸಿಬ್ಬಂದಿಯೋರ್ವರಿಗೆ ಸೀಮಂತ ಮಾಡಿರುವ ಅಪರೂಪದ ಘಟನೆ ನಡೆದಿದೆ.

ಪೊಲೀಸರಿಂದ ಗರ್ಭಿಣಿ ಸಿಬ್ಬಂದಿಗೆ ಸೀಮಂತ;ಮಂಗಳೂರಿನಲ್ಲಿ ಅಪರೂಪದ ಘಟನೆ

ಮಂಗಳೂರು:ಜಿಲ್ಲೆಯ ಪೂರ್ವ (ಕದ್ರಿ) ಠಾಣೆಯ ಪೊಲೀಸರು ಗರ್ಭಿಣಿ ಪೊಲೀಸ್ ಸಿಬ್ಬಂದಿಯೋರ್ವರಿಗೆ ಸೀಮಂತ ಮಾಡಿರುವ ಅಪರೂಪದ ಘಟನೆ ನಡೆದಿದೆ.

ನಗರದ ಬೆಂದೂರ್‌ನ ಸಂತ ಸೆಬಾಸ್ಟಿಯನ್ ಸಭಾಂಗಣದಲ್ಲಿ ಪೊಲೀಸ್ ನಿರೀಕ್ಷಕ ಶಾಂತಾರಾಮ್ ಮತ್ತು ಠಾಣಾ ಸಿಬ್ಬಂದಿಯಿಂದ ಕದ್ರಿ ಠಾಣಾ ಸಿಬ್ಬಂದಿ ಗೌರಮ್ಮ ಅವರಿಗೆ ಸಾಂಪ್ರದಾಯಿಕವಾಗಿ ಸೀಮಂತ ನಡೆಸಿಕೊಟ್ಟರು.

ಪೊಲೀಸ್ ಸಿಬ್ಬಂದಿ
ಕಾರ್ಯಕ್ರಮದಲ್ಲಿ ಗೌರಮ್ಮ ಅವರ ಪತಿ ಶಿವಾನಂದ ಹಾಗೂ ಕುಟುಂಬಸ್ಥರು ಭಾಗವಹಿಸಿದ್ದರು. ಪೊಲೀಸರು ತಮ್ಮ ಕೆಲಸದ ಒತ್ತಡದಲ್ಲಿಯೂ ಈ ರೀತಿಯ ಕಾರ್ಯದಲ್ಲಿ ತೊಡಗಿಸಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ABOUT THE AUTHOR

...view details