ಕರ್ನಾಟಕ

karnataka

ETV Bharat / state

ಬಂಗ್ಲಗುಡ್ಡೆ ಗುಡ್ಡ ಕುಸಿತ: ಮೃತ ಮಕ್ಕಳ ಕುಟುಂಬಕ್ಕೆ 5 ಲಕ್ಷ.ರೂ ಪರಿಹಾರದ ಚೆಕ್​ ವಿತರಣೆ - ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ

ಗುರುಪುರದ ಬಂಗ್ಲಗುಡ್ಡೆ ಗುಡ್ಡ ಕುಸಿತದಿಂದ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ 5 ಲಕ್ಷ ರೂ. ಪರಿಹಾರ ಧನದ ಚೆಕ್ ವಿತರಿಸಿದರು.

bangalagudde
ಕೋಟ ಶ್ರೀನಿವಾಸ ಪೂಜಾರಿ

By

Published : Jul 6, 2020, 1:09 PM IST

ಮಂಗಳೂರು:ನಗರದ ಗುರುಪುರದಲ್ಲಿರುವ ಬಂಗ್ಲಗುಡ್ಡೆ ಗುಡ್ಡ ಕುಸಿತದಿಂದ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಧನದ ಚೆಕ್ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ವಿತರಿಸಿದರು.

ಮೃತ ಮಕ್ಕಳ ಕುಟುಂಬಕ್ಕೆ 5 ಲಕ್ಷ.ರೂ ಪರಿಹಾರ ಚೆಕ್​ ವಿತರಿಸಿದ ಉಸ್ತುವಾರಿ ಸಚಿವರು

ಗುಡ್ಡ ಕುಸಿತದಿಂದ ಮನೆ ಸಂಪೂರ್ಣ ಹಾನಿಗೊಳಗಾಗಿರುವ ಪರಿಣಾಮ ಮೃತ ಮಕ್ಕಳ ಹೆತ್ತವರು ನಗರದ ಮೂಡುಶೆಡ್ಡೆ ಬಳಿಯ ಎದುರು ಪದವಿನಲ್ಲಿರುವ ತಮ್ಮ ಕುಟುಂಬಸ್ಥರ ಮನೆಯಲ್ಲಿ ವಾಸ್ತವ್ಯ ಇದ್ದಾರೆ‌. ಆ ಮನೆಗೆ ತೆರಳಿ ಮೃತ ಮಕ್ಕಳ ಪೋಷಕರಿಗೆ ಪರಿಹಾರ ಚೆಕ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮುಲ್ಕಿ - ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ಡಿಸಿ, ತಹಶೀಲ್ದಾರ್, ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details