ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರ ಪರ್ವತದ ಬಳಿ ಕಣ್ಮರೆಯಾಗಿದ್ದ ಬೆಂಗಳೂರು ಮೂಲದ ಚಾರಣಿಗ ಸಂತೋಷ್ ಇಂದು ಪತ್ತೆಯಾಗಿದ್ದಾರೆ.
ಬೆಂಗಳೂರಿನಿಂದ 12 ಜನ ಯುವಕರ ತಂಡ ಚಾರಣಕ್ಕೆ ಬಂದಿದ್ದ ಸಂದರ್ಭ ಸೆ.15ರಂದು ಕುಮಾರ ಪರ್ವತದ ಗಿರಿಗದ್ದೆ ಎಂಬಲ್ಲಿ ನಾಪತ್ತೆಯಾಗಿದ್ದರು. ಪರ್ವತದಲ್ಲಿ ಚಾರಣ ಮಾಡುತ್ತಿದ್ದ ವೇಳೆ ಸಂತೋಷ್ ದಾರಿ ತಪ್ಪಿದ್ದರು. ಕುಮಾರ ಪರ್ವತದ ಬಳಿಯ ಗುಡ್ಡದಿಂದ ಕುಕ್ಕೆ ದೇವಾಲಯಕ್ಕೆ ತೀರ್ಥದ ಉದ್ದೇಶದಿಂದ ಪೈಪ್ ಲೈನ್ ಮಾಡಲಾಗಿದ್ದು, ಇದರ ಆಧಾರದ ಮೇಲೆಯೇ ಯುವಕ ಇಂದು ಆದಿ ಸುಬ್ರಹ್ಮಣ್ಯ ದೇವಸ್ಥಾನ ತಲುಪಿದ್ದಾರೆ.