ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಸಮಸ್ಯೆ.. ಆರ್‌ಬಿಐ ಕದ ತಟ್ಟಿದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಪತ್ರ

ಆ ಪತ್ರ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ತಲುಪಿದೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಕಳುಹಿಸಿದ ಪತ್ರವನ್ನು ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ..

By

Published : Jul 22, 2020, 3:53 PM IST

Bantwala congress leader Baby kundar
Bantwala congress leader Baby kundar

ಬಂಟ್ವಾಳ :ಕೋವಿಡ್-19 ಸಂಕಷ್ಟದ ಹಿನ್ನೆಲೆ ಎಲ್ಲಾ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮರುಪಾವತಿ ಮುಂದೂಡಿಕೆ ಮತ್ತು ಆರು ತಿಂಗಳ ಬಡ್ಡಿಯನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದು, ಅದೀಗ ಪರಿಶೀಲನೆಗಾಗಿ ಆರ್‌ಬಿಐ ತಲುಪಿದೆ.

ವಿದ್ಯಾರ್ಥಿಗಳು ಹಾಗೂ ಅವರ ಹೆತ್ತವರು ಈಗಾಗಲೇ ಕೊರೊನಾ ಕಾರಣ ಆರ್ಥಿಕ ಸಂಕಷ್ಟದಲ್ಲಿದ್ದು, ಈ ವೇಳೆ ಶೈಕ್ಷಣಿಕ ಸಾಲದ ಮರುಪಾವತಿ ಕಷ್ಟಸಾಧ್ಯವಾಗಿದೆ. ಹಾಗಾಗಿ ಸಾಲ ಮರುಪಾವತಿ ಅವಧಿಯನ್ನು ಮುಂದೂಡಬೇಕು ಮತ್ತು ಆರು ತಿಂಗಳ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಬೇಬಿ ಕುಂದರ್ ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದಿದ್ದರು.

ಆ ಪತ್ರ ಭಾರತ ಸರ್ಕಾರದ ಹಣಕಾಸು ಸಚಿವಾಲಯದಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಕೇಂದ್ರ ಕಚೇರಿಗೆ ತಲುಪಿದೆ. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅವರು ಕಳುಹಿಸಿದ ಪತ್ರವನ್ನು ಗಮನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಗಿದೆ.

ABOUT THE AUTHOR

...view details