ಉಳ್ಳಾಲ(ದಕ್ಷಿಣಕನ್ನಡ):ಶಿಕ್ಷಣ ಇಲಾಖೆಯ ಆದೇಶದಂತೆ ಹಿಜಾಬ್ ಧರಿಸಬೇಡಿ ಎಂದ ಕಾಲೇಜಿನ ಆಡಳಿತ ಮಂಡಳಿಯು ಅಲ್ಲಿಯ ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿನಿಯರಿಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಉಳ್ಳಾಲದ ಭಾರತ್ ಪಿಯು ಕಾಲೇಜಿನಲ್ಲಿ ಗೊಂದಲದ ವಾತಾವರಣದ ಉಂಟಾಗಿತ್ತು.
ಹಿಜಾಬ್ ಧರಿಸುತ್ತೇವೆ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಬಂದ ಶಾಸಕ ಯು.ಟಿ ಖಾದರ್, ಕಾಲೇಜಿನ ಆಡಳಿತಮಂಡಳಿಯೊಂದಿಗೆ ಸಭೆ ನಡೆಸಿದರು. ವಿದ್ಯಾರ್ಥಿಗಳ ಭವಿಷ್ಯ ಮುಖ್ಯ, ವಿದ್ಯಾಭ್ಯಾಸ ಹಾಳಾಗಬಾರದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ಸೂಚಿಸಿದರು.