ಕರ್ನಾಟಕ

karnataka

ETV Bharat / state

ಹಬ್ಬದ ರಜೆಯಲ್ಲಿ ಸಮುದ್ರಕ್ಕೆ ಈಜಲು ಹೋದವನು ಮತ್ತೆ ಬರಲೇ ಇಲ್ಲ...

ಗೆಳೆಯರೊಂದಿಗೆ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದ ಬಾಲಕನ ಮೃತದೇಹ ಇಂದು ಮಂಗಳೂರಿನ ಬೆಂಗರೆಯಲ್ಲಿ ಪತ್ತೆಯಾಗಿದೆ.

By

Published : Oct 8, 2019, 4:33 PM IST

ಸಮುದ್ರಪಾಲಾದ ಬಾಲಕನ‌ ಮೃತದೇಹ ಪತ್ತೆ

ಮಂಗಳೂರು:ಗೆಳೆಯರೊಂದಿಗೆ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದ ಬಾಲಕನ ಮೃತದೇಹ ಇಂದು ಮಂಗಳೂರಿನ ಬೆಂಗರೆಯಲ್ಲಿ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೆಂಗರೆ ನಿವಾಸಿ ಅಲ್ತಾಫ್ ಎಂಬವರ ಪುತ್ರ ಶಾಹಿಲ್ ( 16) ನಿನ್ನೆ ಸಮುದ್ರದಲ್ಲಿ ಗೆಳೆಯರೊಂದಿಗೆ ಆಟವಾಡುತ್ತಿದ್ದ ವೇಳೆ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು. ಮೃತ ಬಾಲಕ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದ. ಹಬ್ಬದ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ತನ್ನ ಸ್ನೇಹಿತರೊಂದಿಗೆ ಸಮುದ್ರಕ್ಕೆ ಇಳಿದಾಗ ಈ ದುರ್ಘಟನೆ ನಡೆದಿತ್ತು.

ಅಗ್ನಿ ಶಾಮಕದಳ ಸಿಬ್ಬಂದಿ ಸತತ ಹುಡುಕಾಟದಿಂದ ಇಂದು ಬಾಲಕನ ಮೃತದೇಹ ಕಸಬ ಬೆಂಗರೆ ಸಮೀಪದ ಸಮುದ್ರತೀರದಲ್ಲಿ ಪತ್ತೆಯಾಗಿದೆ.

ABOUT THE AUTHOR

...view details