ಕರ್ನಾಟಕ

karnataka

ಮೋದಿ ಭಾಷಣಕ್ಕೆ ಬರುತ್ತಿದ್ದ ಯುವಕನಿಗೆ ಗಾಯ... ಯೋಗಕ್ಷೇಮ ವಿಚಾರಿಸಿದ ನಳಿನ್ ಕುಮಾರ್ ಕಟೀಲು

By

Published : Apr 14, 2019, 9:40 AM IST

ಮೋದಿ ಚುನಾವಣಾ ಪ್ರಚಾರ ಭಾಷಣಕ್ಕೆ ಬಸ್​ನಲ್ಲಿ ಬರುತ್ತಿರುವಾಗ ಕಾಲು ಜಾರಿ ಬಿದ್ದು ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದ ಯುವಕನ ಯೊಗಕ್ಷೇಮವನ್ನು ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ವಿಚಾರಿಸಿದರು.

ನಳಿನ್ ಕುಮಾರ್ ಕಟೀಲು

ಮಂಗಳೂರು: ಮೋದಿ ಚುನಾವಣಾ ಪ್ರಚಾರ ಭಾಷಣಕ್ಕೆ ಬಸ್​ನಲ್ಲಿ ಬರುತ್ತಿರುವಾಗ ಯುವಕ ಕಾಲು ಜಾರಿ ಬಿದ್ದು ಗಾಯಗೊಂಡು, ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಸಂಜೆ ನಡೆದಿದೆ. ಮಾಹಿತಿ ತಿಳಿದ ತಕ್ಷಣ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಆಸ್ಪತ್ರೆಗೆ ಭೇಟಿ ನೀಡಿ ಯುವಕನ ಯೋಗಕ್ಷೇಮ ವಿಚಾರಿಸಿದ್ದಾರೆ.

ಸುಳ್ಯ ತಾಲೂಕಿನ ಮರ್ಕಂಜ‌ಗ್ರಾಮದ ಕುಮಾರ್ (30) ಗಾಯಗೊಂಡ ಯುವಕ. ಗಾಯಗೊಂಡ ಕುಮಾರ್ ಅವರನ್ನು ನಗರದ ಎ.ಜೆ.ಶೆಟ್ಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಳಿನ್ ಕುಮಾರ್ ಕಟೀಲು

ಮಾಹಿತಿ ತಿಳಿದ ತಕ್ಷಣ ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು, ಶಾಸಕ ಸಂಜೀವ ಮಠಂದೂರು, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರು ಹಾಗೂ ವಿಹಿಪ ಮುಖಂಡ ಜಗದೀಶ ಶೇಣವ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಯುವಕನ ಯೋಗಕ್ಷೇಮ ವಿಚಾರಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details