ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಬಸ್ ಉದ್ಯಮಿ ಆತ್ಮಹತ್ಯೆ - ಈಟಿವಿ ಭಾರತ್ ಕನ್ನಡ ಸುದ್ದಿ

ಮಂಗಳೂರಿನ ಕದ್ರಿ ಕಂಬಳದಲ್ಲಿ ಬಸ್​ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸ್ ಮಾಲಿಕ ಪ್ರಕಾಶ್ ಶೇಖ
ಬಸ್ ಮಾಲಿಕ ಪ್ರಕಾಶ್ ಶೇಖ

By ETV Bharat Karnataka Team

Published : Oct 1, 2023, 10:57 PM IST

ಮಂಗಳೂರು :ನಗರದ ಕದ್ರಿ ಕಂಬಳದಲ್ಲಿ ಬಸ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಹೇಶ್ ಮೋಟಾರ್ಸ್ ಬಸ್ ಮಾಲಿಕ ಪ್ರಕಾಶ್ ಶೇಖ (45) ಆತ್ಮಹತ್ಯೆಗೆ ಶರಣಾದವರು. ಕದ್ರಿ ಕಂಬಳದಲ್ಲಿರುವ ಅಪಾರ್ಟ್​ಮೆಂಟ್​ನಲ್ಲಿ ವಾಸವಾಗಿದ್ದ ಇವರು ತಮ್ಮ ನಿವಾಸದಲ್ಲಿ ಸಾವಿಗೆ ಶರಣಾಗಿದ್ದಾರೆ.

ಮೂಲತಃ ಮಂಗಳೂರಿನ ಕುಲಶೇಖರ ನಿವಾಸಿಯಾಗಿರುವ ಪ್ರಕಾಶ್ ಶೇಖ ಅವರು ಪತ್ನಿ ಹಾಗೂ ಪುತ್ರಿಯೊಂದಿಗೆ ವಾಸ್ತವ್ಯವಿದ್ದರು. ಇಂದು ಬೆಳಗ್ಗೆ ಅವರು ಸ್ವಲ್ಪಹೊತ್ತು ಮಲಗುತ್ತೇನೆಂದು ತಮ್ಮ ಕೋಣೆಗೆ ಹೋಗಿದ್ದರು‌. ಆದರೆ ಮಧ್ಯಾಹ್ನ ಊಟಕ್ಕೆ ಏಳದಿರುವುದನ್ನು ಕಂಡು ಮನೆಯವರು ಬಾಗಿಲು ಬಡಿದಾಗ ಬಾಗಿಲು ತೆರೆದಿರಲಿಲ್ಲ. ಆ ಬಳಿಕ ನೋಡಿದಾಗ ಸೀಲಿಂಗ್ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಗೊತ್ತಾಗಿದೆ.

ಬಸ್ ಉದ್ಯಮದ ಬಗ್ಗೆ ಅಪಾರ ಪ್ರೀತಿ ಇರಿಸಿದ್ದ ಪ್ರಕಾಶ್ ಶೇಖ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ತಿಳಿದು ಬಂದಿಲ್ಲ. ಈ ಬಗ್ಗೆ ಅವರ ಪತ್ನಿ ಕದ್ರಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕೋಲಾರದಲ್ಲಿ ವ್ಯಕ್ತಿ ಆತ್ಮಹತ್ಯೆ: ಪೊರಕೆಯಿಂದ ಥಳಿಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ವ್ಯಕ್ತಿಯೊಬ್ಬರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೂರಲಾದ ಘಟನೆ ಕೋಲಾರದಲ್ಲಿ‌( ಸೆಪ್ಟೆಂಬರ್- 21-2023) ಜರುಗಿತ್ತು. ಮಾಲೂರು ತಾಲೂಕಿನ ಹುರುಳಗೆರೆ ಗ್ರಾಮದಲ್ಲಿ ಘಟ‌ನೆ ನಡೆದಿದ್ದು, ಶ್ರೀನಿವಾಸ್ (30) ಎಂಬವರು ಸಾವನ್ನಪ್ಪಿದ್ದರು.

ಗ್ರಾಮದ ನಿವಾಸಿಗಳಾದ ಅಶೋಕ್, ರಮೇಶ್, ಧರ್ಮೇಂದ್ರ ಹಾಗೂ ಮಂಜು ಬುಧವಾರ ಸಂಜೆ ಶ್ರೀನಿವಾಸ್‌ಗೆ ಮನಬಂದಂತೆ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅಷ್ಟೇ ಅಲ್ಲದೇ ಜಾತಿ ನಿಂದನೆಯನ್ನೂ ಮಾಡಿದ್ದರು. ಇದರಿಂದ ತೀವ್ರವಾಗಿ ಮನನೊಂದ ಶ್ರೀನಿವಾಸ್ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು.

ಮೃತನ ಪತ್ನಿ ಮತ್ತು ಕುಟುಂಬಸ್ಥರು ಹಲ್ಲೆ ನಡೆಸಿದವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆಗಟ್ಟುವಿಕೆ) ಕಾಯಿದೆ ಅಡಿಯಲ್ಲಿ ದೂರು ದಾಖಲಿಸಿದ್ದರು. ಮಾಲೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು.

ಡೆತ್‌ನೋಟ್ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ:ಪೊಲೀಸರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಡೆತ್‌ನೋಟ್​ ಬರೆದಿಟ್ಟು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿದೆ. ತಲಘಟ್ಟಪುರದ ನಾಗರಾಜ್ (47) ಮೃತರು. ಘಟನಾ ಸ್ಥಳಕ್ಕೆ ತಲಘಟ್ಟಪುರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದರು. ಸನಾವುಲ್ಲಾ ಎಂಬಾತನ ಒಡೆತನದಲ್ಲಿರುವ ಕಂಪೆನಿಯಲ್ಲಿ ನಾಗರಾಜ್ ಕೆಲಸ ಮಾಡುತ್ತಿದ್ದರು. ಈ ಕಂಪೆನಿಯ ಹೆಸರಿನಲ್ಲಿ ಹಣ ಪಡೆದು ವಂಚಿಸಿರುವುದಾಗಿ ನಟರಾಜ್ ಎಂಬವರು ವೈಯಾಲಿಕಾವಲ್ ಠಾಣೆಗೆ ಇತ್ತೀಚೆಗೆ ದೂರು ನೀಡಿದ್ದರು.

ಪ್ರಕರಣ ಸಂಬಂಧ ಕಂಪನಿ ಮಾಲೀಕ ಸನಾವುಲ್ಲಾ ಬದಲಾಗಿ ನಾಗರಾಜ್ ಅವರನ್ನು ಪೊಲೀಸರು ಕರೆದೊಯ್ದು ಕಿರುಕುಳ ನೀಡಿರುವ ಆರೋಪ ಕೇಳಿಬಂದಿತ್ತು. ಇದರಿಂದ ಮನನೊಂದು ನಾಗರಾಜ್ ಎರಡು ಪುಟಗಳ ಡೆತ್‌ನೋಟ್ ಬರೆದು ಬುಧವಾರ ಮಧ್ಯಾಹ್ನ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಇದನ್ನೂ ಓದಿ:ಕೋಲಾರದಲ್ಲಿ ವ್ಯಕ್ತಿ ಆತ್ಮಹತ್ಯೆ: ಜಾತಿನಿಂದನೆ ಆರೋಪ, ಪ್ರಕರಣ ದಾಖಲು

ABOUT THE AUTHOR

...view details