ಕರ್ನಾಟಕ

karnataka

ETV Bharat / state

ವಿದ್ಯುತ್ ಕಂಬಕ್ಕೆ ಬಸ್ ಡಿಕ್ಕಿ: ಮಗು ಸಹಿತ ನಾಲ್ವರಿಗೆ ಗಾಯ

ತಣ್ಣೀರುಬಾವಿಯಿಂದ ಪಿವಿಎಸ್ ಮಾರ್ಗವಾಗಿ ಸ್ಟೇಟ್‌ಬ್ಯಾಂಕ್‌ಗೆ ತೆರಳಬೇಕಿದ್ದ ಖಾಸಗಿ ಬಸ್ ಲಾಲ್‌ಬಾಗ್ ಸಮೀಪ ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಗು ಸಹಿತ ನಾಲ್ವರು ಗಾಯಗೊಂಡಿದ್ದಾರೆ.

By

Published : Aug 4, 2019, 10:48 PM IST

bus

ಮಂಗಳೂರು: ನಗರದ ಲಾಲ್‌ಬಾಗ್ ಬಳಿ ಖಾಸಗಿ ಬಸ್‌ವೊಂದು ಡಿವೈಡರ್ ಮೇಲೆ ಹತ್ತಿ ಬೀದಿ ದೀಪದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು ಸಂಜೆ ನಡೆದಿದೆ. ಈ ಅಪಘಾತದಲ್ಲಿ ಮಗು ಸಹಿತ ನಾಲ್ವರು ಗಾಯಗೊಂಡಿದ್ದಾರೆ.

ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಿವಾಸಿ ಕರಿಯಪ್ಪ ಭಂಗಿ (23), ಕೊಡಿಯಾಲ್‌ಬೈಲ್ ನಿವಾಸಿ ಕಿರಣ್ (28), ಸ್ಥಳೀಯ ನಿವಾಸಿಗಳಾದ ಶಂಕರ್ (28) ಹಾಗೂ ಶರತ್ (2) ಎಂಬ ಮಗು ಗಾಯಾಳುಗಳು.

ಅಪಘಾತಕ್ಕೀಡಾಗಿರುವ ಬಸ್

ತಣ್ಣೀರುಬಾವಿಯಿಂದ ಪಿವಿಎಸ್ ಮಾರ್ಗವಾಗಿ ಸ್ಟೇಟ್‌ಬ್ಯಾಂಕ್‌ಗೆ ತೆರಳಬೇಕಿದ್ದ ಖಾಸಗಿ ಬಸ್ ಲಾಲ್‌ಬಾಗ್ ಸಮೀಪದ ಐಸ್‌ಕ್ರೀಮ್ ಮಳಿಗೆಯೊಂದರ ಬಳಿ ಮಧ್ಯಾಹ್ನ 1:40ಕ್ಕೆ ರಸ್ತೆಯ ಡಿವೈಡರ್ ಮೇಲೆ ಹತ್ತಿ, ಬೀದಿದೀಪದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ಸಂದರ್ಭ ನಾಲ್ವರು ಗಾಯಗೊಂಡಿದ್ದು, ನಗರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಘಟನೆ ನಡೆದ ತಕ್ಷಣವೇ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಘಟನೆಯಲ್ಲಿ ರಸ್ತೆಯ ಡಿವೈಡರ್‌ಗೆ ಹಾನಿಯಾಗಿದೆ. ಅಲ್ಲದೆ, ವಿದ್ಯುತ್ ಕಂಬವು ಮುರಿದು ಬಿದ್ದಿದ್ದು, ಸಂಪೂರ್ಣ ಜಖಂಗೊಂಡಿದೆ. ಬಸ್‌ನ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು ಮಂಗಳೂರು ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details