ಕರ್ನಾಟಕ

karnataka

By

Published : Aug 12, 2019, 2:51 PM IST

ETV Bharat / state

ಮಳೆಗೆ ಮನೆ ಕಳೆದುಕೊಂಡವರಿಗೆ 5 ಸಾವಿರ ಬಾಡಿಗೆ ಸೇರಿ, ವಿವಿಧ ಪರಿಹಾರ ಘೋಷಿಸಿದ ಸಿಎಂ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಹಲವರು ಮನೆಗಳನ್ನೇ ಕಳೆದುಕೊಂಡಿದ್ದಾರೆ. ಇದೀಗ ಜಿಲ್ಲೆಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂತ್ರ್ತರಿಗೆ 5 ಸಾವಿರ ರೂ. ಬಾಡಿಗೆ ಸೇರಿದಂತೆ ವಿವಿಧ ಪರಿಹಾರವನ್ನು ಘೋಷಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಹಾರವನ್ನು ಘೋಷಿಸಿದ್ದಾರೆ

ಮಂಗಳೂರು: ಮಳೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಾಣದ ತನಕ 5 ಸಾವಿರ ತಿಂಗಳಿಗೆ ಬಾಡಿಗೆ ಹಣ ಮತ್ತು 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಹಾರ ಘೋಷಿಸಿದ್ದಾರೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಪೀಡಿತ ಪ್ರದೇಶ ಕುಕ್ಕಾವುನಲ್ಲಿ ಪ್ರವಾಹ ವೀಕ್ಷಣೆ ಮಾಡಿ ನೆರೆ ಸಂತ್ರಸ್ತರೊಂದಿಗೆ ಗಂಜಿ ಕೇಂದ್ರದಲ್ಲಿ ಮಾತುಕತೆ ನಡೆಸಿದ ಬಳಿಕ ಅವರು ಈ ಘೋಷಣೆ ಮಾಡಿದರು.

ಮಳೆಯಲ್ಲಿ ದ.ಕ ಜಿಲ್ಲೆಯ 285 ಮಂದಿ ಮನೆ ಕಳೆದುಕೊಂಡಿದ್ದು, ಅವರಿಗೆ ನಿವೇಶನದ ಜೊತೆ ಐದು ಲಕ್ಷ, ಭಾಗಶಃ ಮನೆ ಹಾನಿಯಾದವರಿಗೆ 1 ಲಕ್ಷ ಮತ್ತು ತಕ್ಷಣದ ಪರಿಹಾರವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ 10 ಸಾವಿರ ನೀಡಲಾಗುವುದು ಎಂದರು. ಕುಕ್ಕಾವು ಪ್ರದೇಶದಲ್ಲಿ ಸೇತುವೆ ಕುಸಿದು ಬಿದ್ದಿರುವುದನ್ನು ವೀಕ್ಷಿಸಿದ ಬಳಿಕ ಅವರು ಗಂಜಿ ಕೇಂದ್ರದಲ್ಲಿ ಸಂತ್ರಸ್ತರ ಜೊತೆಗೆ ಮಾತುಕತೆ ನಡೆಸಿದರು.
.

ABOUT THE AUTHOR

...view details