ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಪುಣ್ಯತಿಥಿ ಆಚರಣೆ.. - ಮಹಾತ್ಮ ಗಾಂಧೀಜಿ ಪುಣ್ಯತಿಥಿ

ಭಾರತದ ಮೊದಲ ಪ್ರಧಾನಿ ಹಾರಿಸಿದ ರಾಷ್ಟ್ರಧ್ವಜವನ್ನು ತೆಗೆದುಹಾಕಿ ಕೆಂಪುಕೋಟೆಯಲ್ಲಿ ಬಿಜೆಪಿ ಸದಸ್ಯ ಬೇರೆ ಧ್ವಜ ಹಾಕಿರುವುದು ದುರಾದೃಷ್ಟಕರ ಸಂಗತಿ..

ಮಹಾತ್ಮ ಗಾಂಧಿ ಪುಣ್ಯತಿಥಿ ಆಚರಣೆ
ಮಹಾತ್ಮ ಗಾಂಧಿ ಪುಣ್ಯತಿಥಿ ಆಚರಣೆ

By

Published : Jan 30, 2021, 4:32 PM IST

ಮಂಗಳೂರು: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾತ್ಮ ಗಾಂಧೀಜಿಯನ್ನು ಕೊಂದ ದೇಶದ್ರೋಹಿಯನ್ನು ಮಹಾತ್ಮ ಎಂದು ಬಣ್ಣಿಸುವ ಮನಸ್ಥಿತಿಯುಳ್ಳ ಪಕ್ಷ ಅಧಿಕಾರದಲ್ಲಿದೆ ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಆಕ್ರೋಶ ವ್ಯಕ್ತಪಡಿಸಿದರು.

ಮಹಾತ್ಮ ಗಾಂಧಿ ಪುಣ್ಯತಿಥಿ ಆಚರಣೆ..

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಪುಣ್ಯತಿಥಿ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಮಹಾತ್ಮ ಗಾಂಧೀಜಿ ಸೇರಿದಂತೆ ಹುತಾತ್ಮರ ಪುಣ್ಯತಿಥಿ ಆಚರಿಸುವ ಮೂಲಕ ಅವರ ಆದರ್ಶಗಳನ್ನು ಜನರಿಗೆ ತಿಳಿಸುತ್ತಿದೆ.

ಭಾರತದ ಮೊದಲ ಪ್ರಧಾನಿ ಹಾರಿಸಿದ ರಾಷ್ಟ್ರಧ್ವಜವನ್ನು ತೆಗೆದುಹಾಕಿ ಕೆಂಪುಕೋಟೆಯಲ್ಲಿ ಬಿಜೆಪಿ ಸದಸ್ಯ ಬೇರೆ ಧ್ವಜ ಹಾಕಿರುವುದು ದುರಾದೃಷ್ಟಕರ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ನೂತನವಾಗಿ ಎಐಸಿಸಿ ಕಾರ್ಯದರ್ಶಿಯಾಗಿ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ಯು ಟಿ ಖಾದರ್, ಮಾಜಿ ಶಾಸಕ ಜೆ.ಆರ್ ಲೋಬೋ ಮೊದಲಾದವರು ಉಪಸ್ಥಿತರಿದ್ದರು.

ABOUT THE AUTHOR

...view details