ಬೆಳ್ತಂಗಡಿ: ಮಡಂತ್ಯಾರು ಗ್ರಾ.ಪಂ ಮತ್ತು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ನ ಧರ್ಮಗುರುಗಳ ನೇತೃತ್ವದ ಐಸಿವೈಎಂ ಮಡಂತ್ಯಾರು, ಶ್ಯಾಡೋ ರೈಡರ್ಸ್ ಮಡಂತ್ಯಾರು, ಕುಕ್ಕಳ ಗ್ರಾಮದ ಬೆರ್ಕಳ ಯುವ ಸಮುದಾಯದ ಸಹಕಾರದಿಂದ ಮಡಂತ್ಯಾರು ಮತ್ತು ಪುಂಜಾಲಕಟ್ಟೆ ಪೇಟೆಯಲ್ಲಿ ಸ್ವಚ್ಚತಾ ಕಾರ್ಯ ನಡೆಸಲಾಯಿತು.
ಕೊರೊನಾ ಎಫೆಕ್ಟ್: ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯಕ್ರಮ - Cleanup program by various organizations
ಮಂಗಳೂರಿನ ಬೆಳ್ತಂಗಡಿಯ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ನ ಧರ್ಮಗುರುಗಳ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
![ಕೊರೊನಾ ಎಫೆಕ್ಟ್: ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಛತಾ ಕಾರ್ಯಕ್ರಮ ಸ್ವಚ್ಛತಾ ಕಾರ್ಯಕ್ರಮ](https://etvbharatimages.akamaized.net/etvbharat/prod-images/768-512-6699586-1039-6699586-1586262504336.jpg)
ಸ್ವಚ್ಛತಾ ಕಾರ್ಯಕ್ರಮ
ಮಡಂತ್ಯಾರು ಪಿಡಿಒ ನಾಗೇಶ್ ಎಂ. ಕೋವಿಡ್ -19 ಕುರಿತು ಜಾಗೃತಿ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ ಕೆ, ಧರ್ಮಗುರುಗಳಾದ ಪಾ. ಬೇಸಿಲ್ ವಾಸ್, ಗ್ರಾ.ಪಂ. ಸದಸ್ಯ ಕಿಶೋರ್ ಶೆಟ್ಟಿ, ವರ್ತಕರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ, ರಮೇಶ್ ಮೂಲ್ಯ. ರೋಟರಿ ಕ್ಲಬ್ ಸದಸ್ಯರು, ಕ್ಯಾಥೊಲಿಕ್ ಸಭಾದ ಸದಸ್ಯರು ಮತ್ತಿತರರು ಹಾಜರಿದ್ದರು.