ಮಂಗಳೂರು: ಎರಡು ದಿನಗಳ ಕರಾವಳಿ ಜಿಲ್ಲೆಯ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇರಳ ಗಡಿಗೆ ಭೇಟಿ ನೀಡುವ ಕಾರ್ಯಕ್ರಮ ರದ್ದುಗೊಳಿಸಲು ಕೇರಳಿಗರ ಪ್ರತಿಭಟನೆ ಕಾರಣ ಎಂದು ಹೇಳಲಾಗುತ್ತಿದೆ.
ನಿನ್ನೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬಂದಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ ಕೇರಳ ಗಡಿ ಭಾಗವಾದ ತಲಪಾಡಿ ಚೆಕ್ಪೋಸ್ಟ್ಗೆ ಭೇಟಿ ನೀಡುವ ಕಾರ್ಯಕ್ರಮವಿತ್ತು.
ಕಳೆದ ಕೆಲವು ದಿನಗಳಿಂದ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರಿಗೆ ಎರಡು ಡೋಸ್ ಕೋವಿಡ್ ಲಸಿಕೆ ಪಡೆದಿದ್ದರೂ ಆರ್ಟಿಪಿಸಿಆರ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿತ್ತು. ಈ ಕಾರಣದಿಂದ ಕೇರಳಿಗರು ತಲಪಾಡಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚಿಗೆ ಎಡಿಜಿಪಿ ಪ್ರತಾಪ್ ರೆಡ್ಡಿ ಅವರ ಪರಿಶೀಲನೆ ವೇಳೆಯಲ್ಲಿಯೂ ತಲಪಾಡಿ ಗಡಿಯ ಕೇರಳ ರಾಜ್ಯಕ್ಕೆ ಸೇರಿದ ಜಾಗದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.