ಕರ್ನಾಟಕ

karnataka

By

Published : Apr 5, 2021, 10:13 PM IST

Updated : Apr 5, 2021, 11:10 PM IST

ETV Bharat / state

ಏಪ್ರಿಲ್ 8 ಮತ್ತು 9ರಂದು ಮುಖ್ಯಮಂತ್ರಿ ಬಿಎಸ್​ವೈ ದಕ್ಷಿಣ ಕನ್ನಡ ಪ್ರವಾಸ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಏಪ್ರಿಲ್ 8 ಮತ್ತು 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

bsy
bsy

ಕಡಬ (ದಕ್ಷಿಣ ಕನ್ನಡ) :ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಏಪ್ರಿಲ್ 8 ಮತ್ತು 9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಏಪ್ರಿಲ್ 8ರಂದು ಸಂಜೆ 4:15ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪುವ ಮುಖ್ಯಮಂತ್ರಿಗಳು ಮಂಗಳೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಂಜೆ 6:30ಕ್ಕೆ ಪ್ರಧಾನಿ ನೇತೃತ್ವದಲ್ಲಿ ಕೋವಿಡ್ ಸಂಬಂಧ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬಳಿಕ ರಾತ್ರಿ 9:15ಕ್ಕೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೂಲಮನೆ ಬೆಳ್ಳಾರೆ ಸಮೀಪದ ಕುಂಜಾಡಿಯಲ್ಲಿ ಧರ್ಮನೇಮೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಂಗಳೂರಿಗೆ ತೆರಳುವ ಮುಖ್ಯಮಂತ್ರಿಗಳು ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಏಪ್ರಿಲ್ 9ರಂದು ಬೆಳಗ್ಗೆ 8:25ರ ವೇಳೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಈ ಮೊದಲು ಮುಖ್ಯಮಂತ್ರಿಗಳ ನಿಗದಿಯಾದ ಬಂಟ್ವಾಳ, ಪುತ್ತೂರು, ಕಡಬದ ರಾಮಕುಂಜದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Last Updated : Apr 5, 2021, 11:10 PM IST

ABOUT THE AUTHOR

...view details