ಕರ್ನಾಟಕ

karnataka

By

Published : Oct 17, 2020, 10:33 PM IST

ETV Bharat / state

ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಯಲ್ಲಿನ ಕೋವಿಡ್​ ಪ್ರಕರಣಗಳ ಸಂಖ್ಯೆ

ದಕ್ಷಿಣ ಕನ್ನಡ, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳ ಕೊರೊನಾ ಪ್ರಕರಣಗಳ ವರದಿ ಇಲ್ಲಿದೆ.

covid
Corona

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಇಂದು 4 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 628 ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 172 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈವರೆಗೆ 28,131 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 212 ಮಂದಿ ಗುಣಮುಖರಾಗಿದ್ದು, ಈವರೆಗೆ 24016 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3487 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 221071 ಮಂದಿಯ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 192940 ನೆಗೆಟಿವ್ ಬಂದಿದೆ. ಈವರೆಗೆ 8104 ಮಾಸ್ಕ್ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು ರೂ 945875 ದಂಡ ವಸೂಲಿ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆ:

ಶಿವಮೊಗ್ಗ ಜಿಲ್ಲೆಯಲ್ಲಿ ಇಂದು 106 ಜನರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 18.220 ಕ್ಕೆ ಏರಿಕೆಯಾಗಿದೆ. ಇಂದು 365 ಜನ ಗುಣಮುಖರಾಗಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಇದುವರೆಗೂ 16.901 ಜನ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 01 ಸಾವು ಸಂಭವಿಸಿದೆ. ಇದುವರೆಗೂ ಜಿಲ್ಲೆಯಲ್ಲಿ ಕೊರೊನಾಕ್ಕೆ ಬಲಿಯಾದವರ ಸಂಖ್ಯೆ 330 ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 1,004 ಜನ ಚಿಕಿತ್ಸೆಯಲ್ಲಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ 119 ಜನ ಸೋಂಕಿತರಿದ್ದಾರೆ. ಕೋವಿಡ್ ಕೇರ್ ಸೆಂಟರ್ ನಲ್ಲಿ 19 ಜನ ಇದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ 125 ಜನ ಇದ್ದಾರೆ. ಮನೆಯಲ್ಲಿ 722 ಜನ ಐಸೋಲೇಷನ್ ನಲ್ಲಿದ್ದಾರೆ. ಆರ್ಯುವೇದ ಕಾಲೇಜಿನಲ್ಲಿ 19 ಸೋಂಕಿತರಿದ್ದಾರೆ.

ಮೆಗ್ಗಾನ್ ಕೋವಿಡ್ ಆಸ್ಪತ್ರೆ

ಜಿಲ್ಲೆಯಲ್ಲಿ ಕಂಟೈನ್ಮೆಂಟ್ ಝೋನ್ ಸಂಖ್ಯೆ 7,045 ಏರಿಕೆ ಹಾಗಿದೆ. ಇದರಲ್ಲಿ‌ 4,796 ಝೋನ್ ವಿಸ್ತರಣೆಯಾಗಿದೆ.

ತಾಲೂಕುವಾರು ಸೋಂಕಿತರ ಸಂಖ್ಯೆ:

ಶಿವಮೊಗ್ಗ-36

ಭದ್ರಾವತಿ-28

ಶಿಕಾರಿಪುರ-07

ತೀರ್ಥಹಳ್ಳಿ-24

ಸೊರಬ-03

ಸಾಗರ-04

ಹೊಸನಗರ-01

ಬೇರೆ ಜಿಲ್ಲೆಯಿಂದ ಶಿವಮೊಗ್ಗ ಜಿಲ್ಲೆಗೆ 3 ಜನ ಸೋಂಕಿತರು ಆಗಮಿಸಿದ್ದಾರೆ. ಇಂದು ಜಿಲ್ಲೆಯಲ್ಲಿ 3,050 ಜನರ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 2,576 ಜನರ ವರದಿ ಬಂದಿದೆ.

ಉತ್ತರಕನ್ನಡ ಜಿಲ್ಲೆ:

ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 156 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 11,970ಕ್ಕೆ ಏರಿಕೆಯಾಗಿದೆ.

ಕಾರವಾರ

ಕಾರವಾರದಲ್ಲಿ 5, ಅಂಕೋಲಾ 8, ಕುಮಟಾದಲ್ಲಿ 35, ಹೊನ್ನಾವರ 12, ಭಟ್ಕಳದಲ್ಲಿ 45, ಶಿರಸಿ 6, ಯಲ್ಲಾಪುರ 1, ಮುಂಡಗೋಡದಲ್ಲಿ 8, ಹಳಿಯಾಳದಲ್ಲಿ 35 ಹಾಗೂ ಜೊಯಿಡಾದಲ್ಲಿ ಓರ್ವನಿಗೆ ಸೋಂಕು ದೃಢಪಟ್ಟಿದೆ. ಇನ್ನು, ಕಾರವಾರದಲ್ಲಿ 18, ಅಂಕೋಲಾದಲ್ಲಿ 13, ಕುಮಟಾದಲ್ಲಿ 31, ಹೊನ್ನಾವರದಲ್ಲಿ 6, ಭಟ್ಕಳದಲ್ಲಿ 3, ಶಿರಸಿ 25, ಸಿದ್ದಾಪುರದಲ್ಲಿ 6, ಭಟ್ಕಳದಲ್ಲಿ 3, ಶಿರಸಿಯಲ್ಲಿ 25, ಸಿದ್ದಾಪುರದಲ್ಲಿ 6, ಮುಂಡಗೋಡದಲ್ಲಿ 12 ಹಾಗೂ ಹಳಿಯಾಳದಲ್ಲಿ ಮೂವರು, ಒಟ್ಟು 117 ಸೋಂಕಿತರು ಗುಣಮುಖರಾಗಿದ್ದಾರೆ. ಹೊನ್ನಾವರ, ಜೊಯಿಡಾದಲ್ಲಿ ತಲಾ ಒಬ್ಬರು, ಕಾರವಾರದಲ್ಲಿ ಇಬ್ಬರು, ಒಟ್ಟು ನಾಲ್ವರು ಮೃತಪಟ್ಟಿದ್ದಾರೆ.

537 ಮಂದಿ ಹೋಮ್ ಐಸೋಲೇಶನ್‌ನಲ್ಲಿದ್ದರೆ, 741 ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 1,278 ಸಕ್ರಿಯ ಪ್ರಕರಣಗಳು ಸದ್ಯ ಜಿಲ್ಲೆಯಲ್ಲಿದ್ದು, ಒಟ್ಟು 157 ಮಂದಿ ಮೃತಪಟ್ಟಿದ್ದಾರೆ.

ABOUT THE AUTHOR

...view details