ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸಮುದಾಯಕ್ಕೆ ಹಬ್ಬಿರುವ ಭೀತಿ ಸೃಷ್ಟಿಸಿದ್ದು, ಜಿಲ್ಲೆಯ ಜನರನ್ನು ಆತಂಕಕ್ಕೀಡುಮಾಡಿದೆ.
ದ.ಕ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸುತ್ತಿರುವ ಕೊರೊನಾ: ಸಮುದಾಯಕ್ಕೆ ಸೋಂಕು ಹಬ್ಬಿರುವ ಭೀತಿ - ಮಂಗಳೂರು ಕೊರೊನಾ ಸುದ್ದಿ
ಇತ್ತೀಚೆಗೆ ದಕ್ಷಿಣ ಕನ್ನಡದಲ್ಲಿ ಜಿಲ್ಲೆಯಲ್ಲಿಯೇ ನೆಲೆಸಿದ, ಯಾವುದೇ ಪ್ರಯಾಣದ ಹಿಸ್ಟರಿ ಇಲ್ಲದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಹಾಗಾಗಿ ಸೋಂಕು ಸಮುದಾಯಕ್ಕೆ ಹಬ್ಬಿರುವ ಭೀತಿ ಎದುರಾಗಿದೆ.
![ದ.ಕ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸುತ್ತಿರುವ ಕೊರೊನಾ: ಸಮುದಾಯಕ್ಕೆ ಸೋಂಕು ಹಬ್ಬಿರುವ ಭೀತಿ Dakshina Kannada](https://etvbharatimages.akamaized.net/etvbharat/prod-images/768-512-7826944-702-7826944-1593486218756.jpg)
ದ.ಕ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸುತ್ತಿರುವ ಕೊರೊನಾ: ಸಮುದಾಯಕ್ಕೆ ಹಬ್ಬಿರುವ ಭೀತಿ
ದ.ಕ ಜಿಲ್ಲೆಯಲ್ಲಿ ಆತಂಕ ಸೃಷ್ಟಿಸುತ್ತಿರುವ ಕೊರೊನಾ: ಸಮುದಾಯಕ್ಕೆ ಹಬ್ಬಿರುವ ಭೀತಿ
ಉಳ್ಳಾಲ ಭಾಗದಲ್ಲಿ ಹೆಚ್ಚಾಗಿ ಇಂತಹ ಪ್ರಕರಣ ಕಾಣಿಸಿಕೊಳ್ಳುತ್ತಿದ್ದು, ಸೋಂಕು ಸಮುದಾಯಕ್ಕೆ ಹಬ್ಬಿರುವ ಭೀತಿ ವ್ಯಕ್ತವಾಗಿದೆ. ಸೋಮವಾರ 32 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು ಇದರಲ್ಲಿ ಒಬ್ಬರು ಹೊರ ರಾಜ್ಯದಿಂದ ಬಂದವರು. 9 ಐಎಲ್ ಐ ಪ್ರಕರಣವಾದರೆ 6 ಸಾರಿ(SARI) ಪ್ರಕರಣ, 11 ಮಂದಿ ಕೊರೊನಾ ರೋಗಿಗಳ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಿಂದ, ಸಂಪರ್ಕದ ಮಾಹಿತಿ ಇಲ್ಲದ 5 ಮಂದಿಗೆ ಕೊರೊನಾ ದೃಢಪಟ್ಟಿದೆ.
ನಿನ್ನೆ 4 ಮಂದಿ ಗುಣಮುಖರಾಗಿದ್ದರೆ, ಈವರೆಗೆ ಜಿಲ್ಲೆಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 426 ಮಂದಿ ಗುಣಮುಖರಾಗಿದ್ದಾರೆ. 265 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.