ಮಂಗಳೂರು: ಲಾಕ್ ಡೌನ್ ಪರಿಣಾಮ ಸಂಕಷ್ಟಕ್ಕೊಳಗಾದ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ನೀಡಿರುವ ಆಹಾರ ಕಿಟ್ನಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ಶಾಮೀಲಾಗಿದ್ದಾರೆ ಎಂಬ ಗುಮಾನಿ ಇದೆ. ಆದ್ದರಿಂದ ಇದನ್ನು ಲೋಕಾಯುಕ್ತರಿಂದ ತನಿಖೆ ನಡೆಸಲಿ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ನ ಮಾಧ್ಯಮ ವಕ್ತಾರ ಎ.ಸಿ.ವಿನಯ್ ರಾಜ್ ಆಗ್ರಹಿಸಿದರು.
ಜಿಲ್ಲಾಡಳಿತಕ್ಕೆ ಆಹಾರ ಕಿಟ್ಗಳನ್ನು ತಯಾರಿಸಿ ಕೊಟ್ಟ ಖಾಸಗಿ ಸಂಸ್ಥೆಯೇ ಶಾಸಕರು, ಸಂಸದರಿಗೂ ಕಿಟ್ ತಯಾರಿಸಿದೆ. ಕಿಟ್ ಅನ್ನು ಮ.ನ.ಪಾ ಕಟ್ಟಡದ ಮುಂಭಾಗದಲ್ಲಿರುವ ಕಟ್ಟಡದಲ್ಲಿ ತಯಾರಿಸಲಾಗಿದ್ದು, ಮನಪಾ ಸದಸ್ಯರಾದಿ ಎಲ್ಲರಿಗೂ ಹಂಚಲಾಗಿತ್ತು. ಅಲ್ಲದೆ ಜಿಲ್ಲಾಡಳಿತ ಕಿಟ್ಗಾಗಿ ಆಹಾರ ಸಾಮಾಗ್ರಿಗಳನ್ನು ಖರೀದಿಸುವಾಗ ಕೆಪಿಟಿಟಿ ನಿಯಮವನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ ಇದನ್ನು ಲೋಕಾಯುಕ್ತರಿಂದ ತನಿಖೆ ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.