ಜಲಾವೃತ ಪ್ರದೇಶಗಳಿಗೆ ದ.ಕ.ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ
ದಕ್ಷಿಣ ಕನ್ನಡ ಜಿಲ್ಲಯಲ್ಲಿ ವಿಪರೀತ ಮಳೆಯಾಗುತ್ತಿರುವ ಪರಿಣಾಮ ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಈ ಹಿನ್ನೆಲೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಳೆಯಿಂದ ಮನೆಗಳು ಜಲಾವೃತ
ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಮಳೆಗೆ ನಗರದ ಹೊರವಲಯದಲ್ಲಿರುವ ಜಪ್ಪುನಮೊಗರು, ಕಲ್ಲಾಪು, ಎಕ್ಕೂರು ಪ್ರದೇಶಗಳಲ್ಲಿ ವಸತಿ ಸಮುಚ್ಚಯಗಳು ಜಲಾವೃತಗೊಂಡಿದೆ. ಈ ಪ್ರದೇಶಗಳಿಗೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಿನ್ನೆ ತಡರಾತ್ರಿ ಈ ವಸತಿ ಸಮುಚ್ಚಯ ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿದೆ. ಫ್ಲ್ಯಾಟ್ ಗಳ ತಳ ಅಂತಸ್ತು ಸಂಪೂರ್ಣ ಜಲಾವೃತಗೊಂಡಿತ್ತು. ಅಗ್ನಿಶಾಮಕದಳ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ದೋಣಿಗಳ ಸಹಾಯದಿಂದ ವೃದ್ಧರು, ಮಕ್ಕಳು ಸೇರಿ 10 ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ.
ಮುಲ್ಕಿಯಲ್ಲಿ ವೃದ್ಧೆಯ ರಕ್ಷಣೆ:ನಗರದ ಹೊರವಲಯದಲ್ಲಿರುವ ಮುಲ್ಕಿಯಲ್ಲಿಯೂ ಮಳೆಯಿಂದ ಮನೆಗಳು ಜಲಾವೃತವಾಗಿದ್ದು, ಇಲ್ಲಿನ ಮನೆಯೊಂದರ ವಯೋವೃದ್ಧೆಯೋರ್ವರನ್ನು ರಕ್ಷಿಸಲಾಗಿದೆ.