ಪುತ್ತೂರು:ಪಿಕಪ್ ವಾಹನವೊಂದರಲ್ಲಿ ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿಕೊಂಡು ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪುತ್ತೂರು ನಗರ ಪೊಲೀಸರು ಚಿಕ್ಕಮುಡ್ನೂರು ಗ್ರಾಮದ ಕೆಮ್ಮಾಯಿ ಎಂಬಲ್ಲಿ ಸೋಮವಾರ ಬೆಳಿಗ್ಗೆ ಪತ್ತೆ ಮಾಡಿ, 4 ಜಾನುವಾರುಗಳನ್ನು ರಕ್ಷಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಟ್ವಾಳ ತಾಲ್ಲೂಕಿನ ವಿಟ್ಲ ಸಮೀಪದ ಶಾಂತಿಮಾರು ಕುಂಡಡ್ಕ ನಿವಾಸಿ ಮಹಮ್ಮದ್ ಮುವಾಜ್ (28), ವಿಟ್ಲ ಕಂಬಳಬೆಟ್ಟು ನಿವಾಸಿ ಮೊಹಮ್ಮದ್ ಹ್ಯಾರೀಸ್(38) ಮತ್ತು ಕಡಬ ತಾಲ್ಲೂಕಿನ ಕೊಯಿಲ ಗ್ರಾಮದ ಕೆಮ್ಮಾರ ನಿವಾಸಿ ಮೊಹಮ್ಮದ್ ಫೈಸಲ್ (24) ಬಂಧಿತ ಆರೋಪಿಗಳು.