ಕರ್ನಾಟಕ

karnataka

ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ: ಮಂಗಳೂರಲ್ಲಿ ಇಬ್ಬರ ಬಂಧನ

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ವಸಂತಿ ಎಂಬ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿ ಪಡಿಸಿದ ಹಿನ್ನೆಲೆ ಇಲ್ಲನ ಬದ್ರಿಯಾ ನಗರದ ಇಸ್ಮಾಯಿಲ್​(45), ಅಶ್ರಫ್​ (32) ಎಂಬುವರನ್ನು ಮಂಗಳೂರು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

By

Published : Apr 11, 2020, 9:48 PM IST

Published : Apr 11, 2020, 9:48 PM IST

Updated : Apr 11, 2020, 10:04 PM IST

Disruption of Asha worker duties: Arrest of two persons in Mangalore
ಆಶಾ ಕಾರ್ಯಕರ್ತೆಯ ಕರ್ತವ್ಯಕ್ಕೆ ಅಡ್ಡಿ: ಮಂಗಳೂರಲ್ಲಿ ಇಬ್ಬರ ಬಂಧನ

ಮಂಗಳೂರು:ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಮಂಗಳುರಿನ ಮಲ್ಲೂರಿನಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸುತ್ತಿದ್ದ ವಸಂತಿ ಎಂಬ ಆಶಾ ಕಾರ್ಯಕರ್ತೆಯ ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಈ ಹಿನ್ನೆಲೆ ಇಲ್ಲನ ಬದ್ರಿಯಾ ನಗರದ ಇಸ್ಮಾಯಿಲ್​(45), ಅಶ್ರಫ್​ (32) ಎಂಬುವರನ್ನು ಮಂಗಳೂರು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಆಶಾ ಕಾರ್ಯಕರ್ತೆ ವಸಂತಿ ಆರೋಗ್ಯ ಇಲಾಖೆಗೆ ಸಂಬಂಧಿಸಿದ ತನ್ನ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸುತ್ತಿರುವಾಗ ಅಲ್ಲಿಗೆ ಬಂದ ಆರೋಪಿಗಳು ಸಾರ್ವಜನಿಕ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುವುದನ್ನು ತಡೆದಿದ್ದಾರೆ. ಅಲ್ಲದೆ ಕರ್ತವ್ಯಕ್ಕೆ ಅಡ್ಡಿಗೊಳಿಸಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬಳಿಕ ದೂರು ನೀಡಿದ ಅನ್ವಯ ಆರೋಪಿಗಳನ್ನು ಬಂಧಿಸಲಾಗಿದೆ.

Last Updated : Apr 11, 2020, 10:04 PM IST

ABOUT THE AUTHOR

...view details