ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಂಪುಟ ನರಸಿಂಹಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕುಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಹಾಯಧನ ವಿತರಣೆ ಮಾಡಿದರು . ಅರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ತ್ರಿಮೂರ್ತಿ ಅವರಿಗೆ ಸಹಾಯಧನದ ಚೆಕ್ ಹಸ್ತಾಂತರ ಮಾಡಿದರು.
ಸ್ವಾಮೀಜಿಗಳಿಂದ ಕುಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಹಾಯಧನ ವಿತರಣೆ..
ಶ್ರೀ ಸುಬ್ರಹ್ಮಣ್ಯದ ಸಂಪುಟ ನರಸಿಂಹಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಕುಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಹಾಯಧನ ವಿತರಣೆ ಮಾಡಿದರು.
Published : Dec 1, 2019, 2:14 PM IST
Published : Dec 1, 2019, 2:14 PM IST
|Updated : Dec 1, 2019, 4:22 PM IST
ಕುಕ್ಕೆ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಯೋಗ ಶಾಲಾ ತಂತ್ರಜ್ಞರನ್ನು ಸರ್ಕಾರವು ಕೈ ಬಿಟ್ಟಿದ್ದು, ಇದರಿಂದಾಗಿ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುವ ಕುಕ್ಕೆ ಕ್ಷೇತ್ರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಸ್ಯೆ ಉದ್ಭವವಾಗಿತ್ತು. ಇಲ್ಲಿ ಪ್ರಯೋಗ ಶಾಲಾ ಸಿಬ್ಬಂದಿ ಸೇರಿ ಆರೋಗ್ಯ ಸಿಬ್ಬಂದಿ ಅನಿವಾರ್ಯವಾಗಿ ಬೇಕಾಗಿದೆ. ಈ ಹಿನ್ನೆಲೆಯಲ್ಲಿ ಈ ಮೊದಲು ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಯೋಗ ಶಾಲಾ ತಂತ್ರಜ್ಞರನ್ನು ವಾಪಸು ಕರೆಸಲಾಗಿದೆ. ಆದರೆ, ಸರ್ಕಾರದಿಂದ ಯಾವುದೇ ಅನುದಾನ ಕೊಡುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪ. ಇದನ್ನು ಮನಗಂಡ ನಾನು ಸಹಕಾರ ಮಾಡುತ್ತೇನೆ ಎಂದು ಸ್ವಾಮೀಜಿ ಹೇಳಿದರು.
TAGGED:
Kukke Subramanya mat news