ಕರ್ನಾಟಕ

karnataka

ETV Bharat / state

ಮಂಗಳೂರಿನಲ್ಲಿ ಬಸ್ ಡಿಕ್ಕಿಯಾಗಿ ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ: ಡ್ರೈವರ್ ಅರೆಸ್ಟ್ - ETV Bharath Kannada

ಡಿಸೆಂಬರ್​ 3ರಂದು ನಡೆದ ಬಸ್​ ಅಪಘಾತ ಪ್ರಕರಣ ಸಂಬಂಧ ನಿನ್ನೆ ಡೈವರ್​ನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಐಪಿಸಿ ಸೆಕ್ಷನ್ 304ರಂತೆ ಪ್ರಕರಣ ದಾಖಲಿಸಲಾಗಿದೆ.

Driver arrested in Mangalore accident case
ಮಂಗಳೂರಿನಲ್ಲಿ ಬಸ್ ಡಿಕ್ಕಿಯಾಗಿ ಮಹಿಳಾ ಟೆಕ್ಕಿ ಮೃತಪಟ್ಟ ಪ್ರಕರಣ

By

Published : Dec 10, 2022, 12:30 PM IST

ಮಂಗಳೂರು(ದಕ್ಷಿಣ ಕನ್ನಡ): ಅತಿವೇಗವಾಗಿ ಬಸ್ ಚಲಾಯಿಸಿಕೊಂಡು ಮಹಿಳಾ ಟೆಕ್ಕಿಯೊಬ್ಬರಿಗೆ ಡಿಕ್ಕಿ ಹೊಡೆದು,ಅವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಸ್ ಚಾಲಕನನ್ನು ನಿನ್ನೆ ಬಂಧಿಸಿದ್ದಾರೆ.

ಪದವಿನಂಗಡಿ ನಿವಾಸಿ ಶರಣ್ ಕುಮಾರ್(35) ಬಂಧಿತ ಬಸ್ ಚಾಲಕ. ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಮೇಘಾ ರಂಜಿತ್ ಪೈ(34) ಮಂಗಳೂರಿನಲ್ಲಿ ತಮ್ಮ ತವರು ಮನೆಗೆ ಬಂದಿದ್ದರು. ಡಿಸೆಂಬರ್​ 3ರಂದು ನಗರದ ಕೊಟ್ಟಾರ ಚೌಕಿ ಎಂಬಲ್ಲಿ ಕಲ್ಲುರ್ಟಿ ದೈವಸ್ಥಾನದ ಮುಂಭಾಗ ರಸ್ತೆ ದಾಟುತ್ತಿದ್ದ ಸಂದರ್ಭ ದ್ವಿಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಗೋಲ್ಡನ್ ಎಂಬ ಸಿಟಿ ಬಸ್ ಡಿಕ್ಕಿ ಹೊಡೆದಿತ್ತು.

ಬಸ್ ಡಿಕ್ಕಿ ಹೊಡೆದ ಪರಿಣಾಮ ಮೇಘಾ ರಂಜಿತ್ ಪೈಯವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಡಿಸೆಂಬರ್​ 8ರಂದು ಮೃತಪಟ್ಟಿದ್ದರು. ಈ ದುರ್ಘಟನೆಗೆ ಚಾಲಕ ಶ್ರವಣ್ ಕುಮಾರ್ ನಿರ್ಲಕ್ಷ್ಯ ಹಾಗೂ ಅಜಾಗರೂಕತೆಯೇ ಕಾರಣ ಎಂದು ಪಾಂಡೇಶ್ವರದ ಸಂಚಾರಿ ಪಶ್ಚಿಮ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು.

ಈ ಹಿನ್ನೆಲೆಯಲ್ಲಿ ಶರಣ್ ಕುಮಾರ್​ನನ್ನು ಪೊಲೀಸರು ನಿನ್ನೆ ಬಂಧಿಸಿ ಆತನ ವಿರುದ್ಧ ಐಪಿಸಿ ಸೆಕ್ಷನ್ 304ರಂತೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:ಗರ್ಭಪಾತ ಮಾತ್ರೆ ತಿಂದು ಅಪ್ರಾಪ್ತೆ ಗರ್ಭಿಣಿ ಸಾವು: ಆರೋಪಿ ಪ್ರೇಮಿಗೆ ಜೀವಾವಧಿ ಶಿಕ್ಷೆ

ABOUT THE AUTHOR

...view details