ಭಟ್ಕಳ (ದಕ್ಷಿಣ ಕನ್ನಡ): ತಾಲೂಕಿನಲ್ಲಿ ಕೊರೊನಾ ವೈರಸ್ ಕಡಿವಾಣಕ್ಕೆ ತಾಲೂಕು ಆಡಳಿತ ಸಾಕಷ್ಟು ರೀತಿಯ ಪ್ರಯತ್ನ ನಡೆಸುತ್ತಿದ್ದು, ಮುಸ್ಲಿಂ ಬಂಧುಗಳ ಶುಕ್ರವಾರದ ಪ್ರಾರ್ಥನೆಯನ್ನು ಅವರ ಮನೆಗಳಲ್ಲಿ ನಡೆಸುವಂತೆ ಮನವೊಲಿಸುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲಾ ಮುಸ್ಲಿಂ ಬಾಂದವರು ತಾಲೂಕು ಆಡಳಿತದ ಸೂಚನೆಯಂತೆ ಪ್ರಾರ್ಥನೆ ಮಾಡಿದರು.
ಬುಧವಾರದಿಂದ ಭಟ್ಕಳದ ಎಲ್ಲೆಡೆ ಡ್ರೋಣ್ ಮೂಲಕ ಜನರ ಓಡಾಟದ ಮೇಲೆ ನಿಗಾ ವಹಿಸಲು ಡಿವೈಎಸ್ಪಿ ಗೌತಮ್ ಕೆ.ಸಿ. ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು, ಅದರಂತೆ ಶುಕ್ರವಾರವೂ ಮುಂದುವರೆದಿದೆ. ಇಲ್ಲಿನ ಪಟ್ಟಣದ ಜಾಮೀಯಾ ಸ್ಟ್ರೀಟ್ ಬಳಿ ಚಿನ್ನದ ಪಳ್ಳಿ ಎದುರು ಪೊಲೀಸ್ ಸರ್ಪಗಾವಲಿನಲ್ಲಿ ಡ್ರೋಣ್ ಕಾರ್ಯಾಚರಣೆ ನಡೆಸಲಾಯಿತು.