ಕರ್ನಾಟಕ

karnataka

ETV Bharat / state

ಖಾಸಗಿ ಆಸ್ಪತ್ರೆಗಳ ಲೂಟಿಕೋರ ನೀತಿಗೆ ತಡೆ ನೀಡಿ, ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸಿ; ಡಿವೈಎಫ್​ಐ ಒತ್ತಾಯ - ಉಳ್ಳಾಲ ಡಿವೈಎಫ್​ಐ ಪ್ರತಿಭಟನಾ ಪ್ರದರ್ಶನ

ಸೇವಾ ಮನೋಭಾವದಿಂದ ಆರಂಭಿಸಿದ ಶಿಕ್ಷಣ ಸಂಸ್ಥೆಗಳೂ ಕೊರೊನಾ ಹೆಸರಲ್ಲಿ ಹಣ ಲೂಟಿ ಮಾಡುತ್ತಿವೆ. ಸಾಕ್ಷರತೆ ಪ್ರಮಾಣ ಹೆಚ್ಚಿದ್ದರೂ ಪ್ರತೀ ದಿನ 8ರಷ್ಟು ಜನ ಕೊರೊನಾದಿಂದ ಸಾವನ್ನಪ್ಪುತ್ತಿದ್ದಾರೆ.

DYFI protest
ಡಿವೈಎಫ್​ಐ

By

Published : Aug 25, 2020, 8:54 PM IST

ಉಳ್ಳಾಲ(ಮಂಗಳೂರು): ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಿ, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವಂತೆ ಡಿವೈಎಫ್​ಐ ಆಗ್ರಹಿಸಿದೆ. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜ್ ಸ್ಥಾಪಿಸಿ ಕೋವಿಡ್ ರೋಗಿಗಳಿಗೆ ಉಚಿತ ಗುಣಮಟ್ಟದ ಚಿಕಿತ್ಸೆ ನೀಡಿ ಹಾಗೂ ಕೋವಿಡ್ ಭ್ರಷ್ಟಾಚಾರದ ತನಿಖೆ ಮಾಡಿ ಎಂದು ಡಿವೈಎಫ್​ಐ ಉಳ್ಳಾಲ ವಲಯ ಸಮಿತಿ ವತಿಯಿಂದ ಪ್ರತಿಭಟನಾ ಪ್ರದರ್ಶನ ನಡೆಯಿತು.

ದೇರಳೆಕಟ್ಟೆಯಲ್ಲಿ ಪ್ರತಿಭಟನಾ ಡಿವೈಎಫ್​ಐಪ್ರದರ್ಶನ ಮಾಡಿದ

ಸರಕಾರ ಆರೋಗ್ಯ ಕ್ಷೇತ್ರವನ್ನು ಖಾಸಗಿ ತೆಕ್ಕೆಯಿಂದ ತೆಗೆದು ತನ್ನ ತೆಕ್ಕೆಯಲ್ಲಿ ಇರಿಸಿದರೆ ಸಾವಿನ ಸಂಖ್ಯೆ ಕಡಿಮೆಯಾಗಬಹುದು. ಆರೋಗ್ಯ ಕ್ಷೇತ್ರವನ್ನು ಸರಕಾರಿ ಆರೋಗ್ಯ ಕ್ಷೇತ್ರ ಮಾಡಬೇಕು. ಹೊರ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಆಗುತ್ತದೆ. ಆದರೆ ನಮ್ಮ ಜಿಲ್ಲೆಗೆ ಮಾತ್ರ ಸರಕಾರಿ ಮೆಡಿಕಲ್ ಕಾಲೇಜು ಬರುತ್ತಿಲ್ಲ. ಶಾಸಕ, ಸಂಸದರೇ ನೀವು ಖಾಸಗಿ ಆಸ್ಪತ್ರೆ ಪ್ರತಿನಿಧಿಯಲ್ಲ, ಜನಪ್ರತಿನಿಧಿಗಳು ಎಂದು ಡಿವೈಎಫ್ಐ ಜಿಲ್ಲಾ ಅಧ್ಯಕ್ಷ ಬಿ.ಕೆ ಇಂತಿಯಾಝ್ ಹೇಳಿದರು.

ವಕೀಲ ನಿತಿನ್ ಕುತ್ತಾರ್ ಮಾತನಾಡಿ, ಸೇವಾ ಮನೋಭಾವದಿಂದ ಆರಂಭಿಸಿದ ಶಿಕ್ಷಣ ಸಂಸ್ಥೆಯೂ ಕೊರೋನಾದ ಹೆಸರಲ್ಲಿ ಹಣ ಮಾಡುತ್ತಿದೆ. ಸಾಕ್ಷರತೆ ಪ್ರಮಾಣ ಹೆಚ್ಚಿದ್ದರೂ ಪ್ರತೀ ದಿನ 8 ರಷ್ಟು ಜನ ಕೊರೊನಾಗೆ ಬಲಿಯಾಗುತ್ತಿದ್ದಾರೆ ಎಂದರು.

ಇನ್ನು ಪ್ರತಿಭಟನೆಯಲ್ಲಿ ಡಿವೈಎಫ್ಐ ಉಳ್ಳಾಲ ವಲಯದ ಅಧ್ಯಕ್ಷ ಅಶ್ರಫ್, ಉಪಾಧ್ಯಕ್ಷ ಜೀವನ್ ರಾಜ್ ಕುತ್ತಾರ್, ರಝಾಕ್ ಮೊಂಟೆಪದವು, ಕಾರ್ಯದರ್ಶಿ ಸುನಿಲ್ ತೇವುಲ, ಸಿಪಿಐಎಂ ಜಿಲ್ಲಾ ಸಮಿತಿ ಸದಸ್ಯರಾದ ಜಯಂತ್ ನಾಯಕ್, ಮುಖಂಡ ಮಹಾಬಲ ದೆಪ್ಪೆಲಿಮಾರ್, ಡಿವೈಎಫ್ಐ ದೇರಳೆಕಟ್ಟೆ ಅಧ್ಯಕ್ಷ ನವಾಝ್, ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಕಾರ್ಯದರ್ಶಿ ಜಗದೀಶ್, ಹರೇಕಳ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಶ್ರಫ್ ಹರೇಕಳ ಮೊದಲಾದವರು ಉಪಸ್ಥಿತರಿದ್ದರು.

ABOUT THE AUTHOR

...view details