ಕರ್ನಾಟಕ

karnataka

ETV Bharat / state

ಶಿಕ್ಷಕರ ಕೊರತೆ ‌ಸಮಸ್ಯೆಗೆ ಶೀಘ್ರವೇ ಪರಿಹಾರ: ಸಚಿವ ನಾಗೇಶ್.. - D. Virendra Hegde

ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳದ ವತಿಯಿಂದ ಜ್ಞಾನದೀಪ ಕಾರ್ಯಕ್ರಮದಡಿ ಈ ವರ್ಷ 600 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ಧರ್ಮಾಧಿಕಾರಿ‌ ‌ಡಾ. ಡಿ‌. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

chinnara angala programme
ಚಿನ್ನರ ಅಂಗಳ ಕಾರ್ಯಕ್ರಮ

By

Published : Nov 2, 2021, 11:36 PM IST

ಬೆಳ್ತಂಗಡಿ: ಕೇವಲ ಮಕ್ಕಳು ಮಾತ್ರವಲ್ಲದೆ ಶಿಕ್ಷಕರಿಗೂ ಶಾಲೆ ಪ್ರಾರಂಭವಾಗಿದೆ. ಅವರು ಸಂತಸದಿಂದ ಇದ್ದಾರೆ. ಇದು ಶಿಕ್ಷಕರು ಮಕ್ಕಳ ಮೇಲೆ ಇಟ್ಟಿರುವ ಕಾಳಜಿಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಬಿ. ಎಸ್ ನಾಗೇಶ್ ಹೇಳಿದ್ದಾರೆ.

ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಬಿ. ಎಸ್ ನಾಗೇಶ್

ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಚಿನ್ನರ ಅಂಗಳ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸ್ಲೇಟು ಹಾಗೂ ಬಳಪ ವಿತರಿಸಿ ಮಾತನಾಡಿದ ಸಚಿವ ಬಿ.ಸಿ ನಾಗೇಶ್​, ಧರ್ಮಾಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆ ಅವರು ಸರ್ಕಾರದ ಜೊತೆ ಕೈ ಜೋಡಿಸಿ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಬೇಕಾದ ಬೇಂಚ್, ಡೆಸ್ಕ್ ಉಚಿತವಾಗಿ ನೀಡುವ ಜೊತೆಗೆ ಆ ವಸ್ತುಗಳು ಸಂಬಂಧಿಸಿದ ಶಾಲಾ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನೂ ಮಾಡಿದ್ದಾರೆ ಎಂದರು.

ಕೊರೊನಾ ಸಮಯದಲ್ಲಿ ಬಡವರಿಗೆ ಉಚಿತವಾಗಿ ಕಿಟ್ ನೀಡಿದ್ದಾರೆ. ಕೃಷಿ ಮೇಳ ಮಾಡಿ ರೈತರ ಖುಷಿಯಲ್ಲಿಯೂ ಬಾಗಿಯಾಗಿದ್ದಾರೆ. ಶಿಕ್ಷಣದಲ್ಲಿ ಸಂಸ್ಕಾರವನ್ನು ನೀಡುವ ಕೆಲಸ ಮಾಡಿದ್ದಾರೆ. ನೂತನ ಶಿಕ್ಷಣ ‌ನೀತಿ ಬರುತ್ತಿದೆ. ಅದಕ್ಕೆ ಪೂಜ್ಯರ ಆಶೀರ್ವಾದ ಅಗತ್ಯ. ಜಿಲ್ಲೆಯಲ್ಲಿ ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇದೆ. ಇದನ್ನು ಶೀಘ್ರವೇ ಸರಿಪಡಿಸಲಾಗುವುದು‌ ಎಂದು ಹೇಳಿದರು.

ಕೋವಿಡ್​ನಿಂದ ತುಂಬಾ ತೊಂದರೆಗೆ ಒಳಗಾದವರು ಪುಟ್ಟ ಮಕ್ಕಳು. ಬೇರೆ ಮಕ್ಕಳ‌ ಜೊತೆ ಆಟ ಆಡಿ ಖುಷಿ ಪಡೆಯುವುದು ನಿಂತು ಹೋಗಿತ್ತು. ದೇವರ ಆಶೀರ್ವಾದದಿಂದ ಕೊರೊನಾ ಈಗ ಕಡಿಮೆ ಆಗಿದೆ. ದೇಶದ ಎಲ್ಲಾ ಜನರಿಗೂ ಉಚಿತ ವ್ಯಾಕ್ಸಿನ್ ನೀಡುವ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ್ದಾರೆ. ಇತರ ರಾಷ್ಟ್ರಗಳಿಗೂ ಹಂಚುವಂತಹ ಕೆಲಸ ನಡೆಯುತ್ತಿದೆ. ಆಶಾ ಕಾರ್ಯಕರ್ತೆಯರು ಮನೆ ಬಾಗಿಲಿಗೆ ಹೋಗಿ ಮನವೊಲಿಸಿ ಜನತೆಗೆ ವಾಕ್ಸಿನ್ ಮಾಡಿಸಿದ್ದಾರೆ ಎಂದರು.

ಧರ್ಮಾಧಿಕಾರಿ‌ ‌ಡಾ. ಡಿ‌. ವೀರೇಂದ್ರ ಹೆಗ್ಗಡೆ ಮಾತನಾಡಿ, ಕೊರೊನಾದಿಂದಾಗಿ ಮಕ್ಕಳು ಎರಡು ವರ್ಷಗಳಿಂದ ತುಂಬಾ ಕಷ್ಟಪಟ್ಟಿದ್ದಾರೆ. ತಾಂತ್ರಿಕತೆ ಬೆಳೆದ ಪರಿಣಾಮ ಆನ್​ಲೈನ್​ ಕ್ಲಾಸ್​ನಿಂದ ಶಿಕ್ಷಣ ಜೀವಂತವಾಗಿದೆ. ಕಷ್ಟವಾದರೂ ಅದನ್ನು ಎದುರಿಸುವ ಶಕ್ತಿ ದೇವರು‌ ನೀಡಿದ್ದಾನೆ. ಅಧ್ಯಾಪಕರು, ಮಕ್ಕಳನ್ನು ಶಾಲೆಯ ಕಡೆಗೆ ಬರುವಂತೆ ಆಕರ್ಷಿಸಬೇಕು. ಶಾಲೆಗೆ ಬರಲು ಮಕ್ಕಳು ಆಸಕ್ತರಾಗಿದ್ದಾರೆ ಎಂದು ತಿಳಿಸಿದರು.

ಶಿಕ್ಷಕರ ಕೊರತೆ ಇರುವ ಶಾಲೆಗಳಿಗೆ ಧರ್ಮಸ್ಥಳದ ವತಿಯಿಂದ ಜ್ಞಾನದೀಪ ಕಾರ್ಯಕ್ರಮದಡಿ ಈ ವರ್ಷ 600 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಧಾರವಾಡ ಜಿಲ್ಲೆಯ ಹತ್ತು ಶಾಲೆಗಳ ಸರ್ವತೋಮುಖ ಪ್ರಗತಿಗೆ ನೆರವು ನೀಡಲಾಗಿದೆ. ಶಾಲೆಗಳಿಗೆ ಕಟ್ಟಡ, ಶೌಚಾಲಯ, ಕ್ರೀಡಾ ಸಾಮಗ್ರಿ ಮೊದಲಾದ ಮೂಲ ಸೌಕರ್ಯ ಒದಗಿಸಲು ಈವರೆಗೆ 20.70 ಕೋಟಿ ರೂ. ಪೂರಕ ಅನುದಾನ ನೀಡಲಾಗಿದೆ ಎಂದು ಹೇಳಿದರು.

ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ 311 ಶಾಲೆಗಳಿಗೆ 2370 ಬೆಂಚು – ಡೆಸ್ಕ್ ಗಳನ್ನು ಮಂಜೂರು ಮಾಡಲಾಗಿದೆ. ಈವರೆಗೆ ರಾಜ್ಯದ 30 ಜಿಲ್ಲೆಗಳ 9,776 ಶಾಲೆಗಳಿಗೆ 63,553 ಜೊತೆ ಡೆಸ್ಕ್ - ಬೇಂಚ್ ಪೂರೈಕೆ ಮಾಡಲಾಗಿದೆ. ಇದಕ್ಕಾಗಿ 20.17 ಕೋಟಿ ರೂ. ವಿನಿಯೋಗಿಸಲಾಗಿದೆ ಎಂದರು.

ಓದಿ:ದ್ವೇಷ, ಜಾತಿ-ಧರ್ಮದ ರಾಜಕಾರಣ ಬಹಳ ದಿನ ನಡೆಯಲ್ಲ: ಶೋಭಾ ಕರಂದ್ಲಾಜೆ

ABOUT THE AUTHOR

...view details