ಕರ್ನಾಟಕ

karnataka

By

Published : Dec 13, 2020, 7:56 PM IST

ETV Bharat / state

ನಾಲ್ವರ ನಡುವೆ ಮಾತಿನ ಚಕಮಕಿ, ಹೊಡೆದಾಟ: ಖಾಸಗಿ ಆಸ್ಪತ್ರೆಗೆ ದಾಖಲು

ಪುತ್ತೂರು ತಾಲೂಕಿನ ಸರ್ವೆ ಎಂಬಲ್ಲಿ ಮದುವೆ ಡಿನ್ನರ್ ಬಳಿಕ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಗಲಾಟೆ ತಾಕಕ್ಕೇರಿ ಹೊಡೆದಾಟ ಸಂಭವಿಸಿದ್ದು ಮುಂಡೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಸಹಿತ ನಾಲ್ವರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಖಾಸಗಿ ಆಸ್ಪತ್ರೆಗೆ ದಾಖಲು
ಖಾಸಗಿ ಆಸ್ಪತ್ರೆಗೆ ದಾಖಲು

ಪುತ್ತೂರು: ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಬಳಿ ನಡೆದ ಪ್ರತಿಭಟನೆ ಮತ್ತು ರಾಜಕೀಯ ವೈಷಮ್ಯದ ಆರೋಪಕ್ಕೆ ಸಂಬಂಧಿಸಿ ನಾಲ್ವರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ, ಮುಂಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಎಸ್.ಡಿ.ವಸಂತ ಸಹಿತ ನಾಲ್ವರು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಾಲ್ವರ ನಡುವೆ ಮಾತಿನ ಚಕಮಕಿ, ಹೊಡೆದಾಟ

ಮುಂಡೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಸರ್ವೆ ಗ್ರಾಮದ ಸರ್ವೆದೋಳಗುತ್ತು ನಿವಾಸಿ ಎಸ್.ಡಿ. ವಸಂತ ಮತ್ತು ಭಕ್ತಕೋಡಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಸರ್ವೆ ಗ್ರಾಮದ ಕರಂಬಾರು ನಿವಾಸಿ ಸುಬ್ರಹ್ಮಣ್ಯ ಕರಂಬಾರು ಅವರು ಪುತ್ತೂರು ಮಹಾವೀರ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಓದಿ:ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೃತ್ಯ: ರಾಯಚೂರಿನ ಗ್ರಾ.ಪಂನಲ್ಲಿ ಸದಸ್ಯ ಸ್ಥಾನಗಳ ಹರಾಜು!

ಮೇಗಿನಗುತ್ತು ನಿವಾಸಿ ಸ್ವಸ್ತಿಕ್ ಮತ್ತು ಭಕ್ತಕೋಡಿ ನಿವಾಸಿ ಮೈಕ್ ಅಪರೇಟರ್ ಸಂದೀಪ್ ಅವರು ಪುತ್ತೂರು ಆದರ್ಶ ಅಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details