ಕರ್ನಾಟಕ

karnataka

ವಿಟ್ಲ ಬಸ್ ನಿಲ್ದಾಣದ ಬಳಿ ಬೆಂಕಿ ಅವಘಡ: ಎರಡು ಅಂಗಡಿಗಳು ಭಸ್ಮ

By

Published : Oct 20, 2020, 10:39 AM IST

ಇಂದು ಬೆಳಗ್ಗೆ ಬಂಟ್ವಾಳ ತಾಲೂಕಿನ ವಿಟ್ಲ ಪೇಟೆಯಲ್ಲಿ ಅಗ್ನಿ ಅವಘಡಕ್ಕೆ ಎರಡು ಅಂಗಡಿ ಮಳಿಗೆಗಳು ಸುಟ್ಟು ಕರಕಲಾಗಿವೆ.

Fire accident in bantwal
ವಿಟ್ಲ ಬಸ್ ನಿಲ್ದಾಣ ಬಳಿ ಬೆಂಕಿ ಅವಘಡ: ಎರಡು ಅಂಗಡಿಗಳು ಭಸ್ಮ

ಬಂಟ್ವಾಳ:ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ.

ವಿಟ್ಲ ಬಸ್ ನಿಲ್ದಾಣದ ಬಳಿ ಬೆಂಕಿ ಅವಘಡ: ಎರಡು ಅಂಗಡಿಗಳು ಭಸ್ಮ

ವಿಟ್ಲದ ಕೆಎಸ್ಆರ್​​ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ. ಟವರ್ಸ್​ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೇಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಆರಂಭದಲ್ಲಿ ಪೇಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದಾರೆ. ನಂತರದಲ್ಲಿ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ. ಇದರಿಂದಾಗಿ ಎರಡೂ ಅಂಗಡಿಗಳು ಸುಟ್ಟುಹೋಗಿವೆ.

ABOUT THE AUTHOR

...view details