ಕರ್ನಾಟಕ

karnataka

ETV Bharat / state

ಫಾಕ್ಟರಿಯಲ್ಲಿ ಕೋಟ್ಯಂತರ ಮೌಲ್ಯದ ಕಚ್ಚಾ ಸಾಮಗ್ರಿ ಕಳವು : ನಾಲ್ವರು ಖದೀಮರ ಬಂಧನ

ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್​ ಪ್ಯಾಕಿಂಗ್​ ಪ್ರೈವೇಟ್​ ಲಿಮಿಟೆಡ್​ನ ನೌಕರನೇ ಕಚ್ಚಾವಸ್ತುವನ್ನು ಅಕ್ರಮವಾಗಿ ಹಲವಾರು ವರ್ಷಗಳಿಂದ ಸಾಗಿಸುತ್ತಿದ್ದ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

By

Published : Oct 14, 2022, 10:37 PM IST

Etv Bharatraw-materials-worth-crores-were-stolen-from-a-factory-employee
Etv Bharatಮಹೇಶ್ ಕುಲಾಲ್ ಯಾನೆ ಮಹೇಶ್ ರಘು ಕುಲಾಲ್

ಮಂಗಳೂರು (ದಕ್ಷಿಣ ಕನ್ನಡ) : ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್​ ಪ್ಯಾಕಿಂಗ್​ ಪ್ರೈವೇಟ್​ ಲಿಮಿಟೆಡ್​ನ (Bright Packaging Pvt. Ltd) ಕಂಪನಿಗೆ ಗುಜರಾತ್​ನಿಂದ ಬರುತ್ತಿದ್ದ ಕೋಟ್ಯಂತರ ಪ್ಲಾಸ್ಟಿಕ್ ಕಚ್ಚಾ ಸಾಮಗ್ರಿ ಕಳ್ಳತನ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರು ಮಂಗಳೂರಿನ ಬಿಜೈ ಕಾಪಿಕಾಡಿನ ಮಹೇಶ್ ಕುಲಾಲ್ ಯಾನೆ ಮಹೇಶ್ ರಘು ಕುಲಾಲ್(38), ಶಕ್ತಿನಗರದ ಅನಂತ ಸಾಗರ(39), ಕಡಂದಳೆಯ ಸಾಯಿ ಪ್ರಸಾದ್ (35), ಚೆನ್ನೈನ ಕಿರಣ್ ಸಮಾನಿ(53) ಆಗಿದ್ದಾರೆ.

ಇದರಲ್ಲಿ ಒಬ್ಬ ಕಂಪನಿ ನೌಕರನಾಗಿದ್ದು, ಉಳಿದ ಮೂವರು ಆತನೊಂದಿಗೆ ಸೇರಿಕೊಂಡು ಕೃತ್ಯ ಎಸಗಿದ್ದಾರೆ. ಮಂಗಳೂರು ಸಿಸಿಬಿ ಹಾಗೂ ಪಣಂಬೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಐಶಾರಾಮಿ ಕಾರುಗಳು ಮತ್ತು ಲಾರಿ ವಶಕ್ಕೆ

ಬೈಕಂಪಾಡಿಯ ಬ್ರೈಟ್ ಪ್ಯಾಕೆಜಿಂಗ್ ಪ್ರೈ.ಲಿ. ಎಂಬ ಕಂಪನಿಯಲ್ಲಿ ಪಾಲಿಪ್ರೊಪಿಲೀನ್ ವೋವೆನ್​ ಸಾಕ್ಸ್(Polypropylene Woven Sacks) ಉತ್ಪನ್ನ ತಯಾರಿಸುತ್ತಿದೆ. ಇದಕ್ಕೆ ಬೇಕಾದ ಪಾಲಿಪ್ರೊಪಿಲೀನ್ (Polypropylene) ಕಚ್ಚಾ ಸರಕುಗಳನ್ನು ಕಂಪನಿಗೆ ತರಿಸಲಾಗುತ್ತಿತ್ತು. ಕಂಪನಿಗೆ ಲಾರಿಯಲ್ಲಿ ಬರುತ್ತಿದ್ದ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಯಲ್ಲಿ ಸ್ಟೋರ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ಕುಲಾಲ್ ಎಂಬಾತ ಕಂಪನಿಯಲ್ಲಿ ಸ್ವೀಕೃತಿಗೊಂಡಂತೆ ಪೋರ್ಜರಿ ದಾಖಲಾತಿ ಸೃಷ್ಟಿಸಿಕೊಂಡಿದ್ದ.

ಫೇಕ್​ ಬಿಲ್​ : 2019ನೇ ಡಿಸೆಂಬರ್ ತಿಂಗಳಿನಿಂದ 2022 ಜನವರಿ ತಿಂಗಳವರೆಗೆ ಕೋಟ್ಯಂತರ ಮೌಲ್ಯದ 36 ಟ್ರಕ್​ಗಳಲ್ಲಿ ಬಂದ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಗೆ ತಿಳಿಯದಂತೆ ಕಳವು ಮಾಡಿದ್ದ. ಕಳವು ಮಾಡಿದ ಕಚ್ಚಾ ಸರಕುಗಳನ್ನು ಮಹೇಶ್ ಕುಲಾಲ್​ನ ಸ್ನೇಹಿತನಾದ ಅನಂತ ಸಾಗರ ಎಂಬಾತನಿಗೆ ನೀಡಿದ್ದ. ಈ ಕಚ್ಚಾ ಸರಕುಗಳನ್ನು ಅನಂತ ಸಾಗರ್ ಕೆಲಸ ಮಾಡುವ ಬೈಕಂಪಾಡಿಯ ವಿಧಿ ಎಂಟರ್ ಪ್ರೈಸಸ್​ನ ಹೆಸರಿನಲ್ಲಿ ನಕಲಿ ಬಿಲ್​ ಮಾಡಿ ಅದನ್ನು ಬೆಂಗಳೂರಿನ ಹೆಚ್.ಎಸ್ ಪಾಲಿಮಾರ್​ನ ಆರೋಪಿ ಕಿರಣ್ ಸಾಮಾನಿ ಎಂಬುವರಿಗೆ ಮಾರಾಟ ಮಾಡಿದ್ದ.

36 ಲೋಡ್ ಪಾಲಿಪ್ರೊಪಿಲೀನ್ ಕಳ್ಳ ಸಾಗಾಟ : ಆರೋಪಿಗಳು ಕೋಟ್ಯಂತರ ಮೌಲ್ಯದ 36 ಲೋಡ್ ಸುಮಾರು 840 ಟನ್ ಪಾಲಿಪ್ರೊಪಿಲೀನ್ ಕಚ್ಚಾ ಸರಕುಗಳನ್ನು ಕಂಪನಿಗೆ ಗೊತ್ತಿಲ್ಲದೆ ಕಳವು ಮಾಡಿ ಮಾರಾಟ ಮಾಡಿದ್ದರು. ಈ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಇನ್ಸ್​ಕ್ಟರ್ ಮಹೇಶ್ ಪ್ರಸಾದ್ ಹಾಗೂ ಪಣಂಬೂರು ಠಾಣಾ ಇನ್ಸ್​ಪೆಕ್ಟರ್ ಸೋಮಶೇಖರ ನೇತೃತ್ವದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಎಡದಿಂದ ಕಿರಣ್ ಸಮಾನಿ, ಅನಂತ ಸಾಗರ, ಸಾಯಿ ಪ್ರಸಾದ್

ಆರೋಪಿಯ ಐಶಾರಾಮಿ ಜೀವನ :ಮಹೇಶ್ ಕುಲಾಲ್ಕಳವು ಮಾಡಿದ ಹಣದಲ್ಲಿ ಮಂಗಳೂರಿನ ವಿವಿಧ ಕಡೆಗಳಲ್ಲಿ ಜಮೀನು ಖರೀದಿ ಮಾಡಿದ್ದಾನೆ. ಅಲ್ಲದೇ ಕಾರುಗಳನ್ನು ಖರೀದಿ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ. ಅಲ್ಲದೇ ತನ್ನ ಪತ್ನಿಯ ಹೆಸರಿನಲ್ಲಿ ಬ್ಯಾಂಕ್​ನಲ್ಲಿ ಹಣ ಠೇವಣಿ ಇರಿಸಿ, ಇನ್ಸೂರೆನ್ಸ್, ಶೇರ್​ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ದ. ಅಲ್ಲದೇ ಪತ್ನಿಯ ಹೆಸರಿನಲ್ಲಿ ನಗರದ 3 ಕಡೆಗಳಲ್ಲಿ ಐಷಾರಾಮಿ ಸೆಲೂನ್​ಗಳನ್ನು ತೆರೆದಿದ್ದ. ಅನಂತ ಸಾಗರನು ಮನೆಯನ್ನು ಕಟ್ಟಿಸಿ ಐಷಾರಾಮಿ ಕಾರನ್ನು ಖರೀದಿ ಮಾಡಿ ಜೀವನ ಸಾಗಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವು ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಆರೋಪಿಗಳಿಂದ 6 ಮೊಬೈಲ್ ಪೋನ್, 4 ಲ್ಯಾಪ್ ಟಾಪ, 1 ಕಂಪ್ಯೂಟರ್, ಮೂರು ಕಾರು ಮತ್ತು ಒಂದು ಲಾರಿ ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ :ಲೋಕಾಯುಕ್ತ ದಾಳಿ ವೇಳೆ ಸಿಕ್ಕಿಬಿದ್ದ ಅಧಿಕಾರಿಗೆ 1 ಕೋಟಿ ದಂಡ ವಿಧಿಸಿದ ಕೋರ್ಟ್​

ABOUT THE AUTHOR

...view details