ಕರ್ನಾಟಕ

karnataka

ಗುಡ್ಡ ಕುಸಿತದಿಂದ ಸಂಚಾರ ಅಸ್ತವ್ಯಸ್ತ: ಆ.14 ವರೆಗೆ ಚಾರ್ಮಾಡಿ ಘಾಟ್​​ ಬಂದ್

By

Published : Aug 9, 2019, 10:57 PM IST

ಚಾರ್ಮಾಡಿ ಘಾಟಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಆಗಸ್ಟ್​ 14 ರವರೆಗೆ ಘಾಟಿ ರಸ್ತೆ ಬಂದ್ ಮಾಡಲಾಗಿದೆ.

ಚಾರ್ಮಾಡಿ ಘಾಟಿ

ಮಂಗಳೂರು:ಮಂಗಳೂರಿನಿಂದ ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಆಗಸ್ಟ್​​​ 14 ರವರೆಗೆ ವಾಹನ ಸಂಚಾರ ನಿಷೇಧಿಸಿ ದ.ಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿಯ ಆದೇಶ ಪತ್ರ

ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು ವಿಲ್ಲುಪುರಂ ಹೆದ್ದಾರಿಯಲ್ಲಿ ಬರುವ ಚಾರ್ಮಾಡಿ ಘಾಟ್​​ನಲ್ಲಿ ನಿರಂತರವಾಗಿ ಗುಡ್ಡ ಕುಸಿತ, ಮರಗಳ ಧರೆಗುರುಳುತ್ತಿವೆ. ಅಷ್ಟೇ ಅಲ್ಲ ಈ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ, ಇನ್ನಷ್ಟು ಮರಗಳು ಬೀಳುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಚಾರ್ಮಾಡಿ ಘಾಟ್​​​ನಲ್ಲಿ ಸಂಚಾರ ನಿಷೇಧಿಸಲಾಗಿದೆ.

ABOUT THE AUTHOR

...view details