ಕರ್ನಾಟಕ

karnataka

ETV Bharat / state

ನಾನು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಲ್ಲ, ಆದ್ರೆ ನನ್ನ ಹೆಸರೇ ಮುಂಚೂಣಿಯಲ್ಲಿದೆ: ರಾಜೇಂದ್ರ ಕುಮಾರ್

ಜನಾರ್ದನ ಪೂಜಾರಿ ಅವರು ತನ್ನ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವುದಕ್ಕೆ ಕಾಂಗ್ರೆಸ್​ ಮುಖಂಡ ರಾಜೇಂದ್ರ ಕುಮಾರ್​ ಪ್ರತಿಕ್ರಿಯಿಸಿದ್ದಾರೆ. 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಸ್ಪರ್ಧಿಸಿದ್ದಾಗ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದವನು ನಾನು. ಹಿರಿಯರಾದ ಅವರ ಬಗ್ಗೆ ಮಾತನಾಡುವುದಿಲ್ಲ ಎಂದಿದ್ದಾರೆ.

By

Published : Mar 22, 2019, 8:23 PM IST

ಎಂ ಎನ್ ರಾಜೇಂದ್ರ ಕುಮಾರ್

ಮಂಗಳೂರು: ನಾನು ಕಾಂಗ್ರೆಸ್ ಟಿಕೆಟ್​ಗೆ ಅರ್ಜಿ ಹಾಕಿಲ್ಲ, ಆಕಾಂಕ್ಷಿಯೂ ಅಲ್ಲ. ಆದರೆ ಹೈಕಮಾಂಡ್​​ ಬಳಿ ನನ್ನ ಹೆಸರೇ ಮುಂಚೂಣಿಯಲ್ಲಿದೆ ಎಂದು ಎಂ ಎನ್ ರಾಜೇಂದ್ರ ಕುಮಾರ್ ತಿಳಿಸಿದರು.

ನಗರದಲ್ಲಿ ಮಾತನಾಡಿದ ಅವರು, ನಾನು ಆಕಾಂಕ್ಷಿಯಲ್ಲದೆ ಇದ್ದರೂ ಮಂಗಳೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನನ್ನ ಹೆಸರು ಮುಂಚೂಣಿಯಲ್ಲಿದೆ. ಕಾಂಗ್ರೆಸ್ ನನಗೆ ಸಾಕಷ್ಟು ಸಹಾಯ ‌ಮಾಡಿದೆ. ಆ ಕಾರಣದಿಂದ ಕಾಂಗ್ರೆಸ್​ನಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ ಎಂದು ತಿಳಿಸಿದರು.

ಎಂ ಎನ್ ರಾಜೇಂದ್ರ ಕುಮಾರ್

ಜನಾರ್ದನ ಪೂಜಾರಿ ಅವರು ತನ್ನ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ರಾಜೇಂದ್ರ ಕುಮಾರ್​, 2014 ರ ಲೋಕಸಭಾ ಚುನಾವಣೆಯಲ್ಲಿ ಜನಾರ್ದನ ಪೂಜಾರಿ ಸ್ಪರ್ಧಿಸಿದ್ದಾಗ ಅವರ ಪ್ರಚಾರ ಸಮಿತಿ ಅಧ್ಯಕ್ಷನಾಗಿದ್ದವನು ನಾನು. ಹಿರಿಯರಾದ ಅವರ ಬಗ್ಗೆ ಮಾತನಾಡುವುದಿಲ್ಲ ಎಂದರು.

ಸ್ಪರ್ದೆಗೆ ಅವಕಾಶ ಕೊಟ್ಟರೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತೇನೆ. ನಾನು ಗೆದ್ದರೆ ಮಂಗಳೂರು ಜನತೆಯ ಹೆಮ್ಮೆ. ಬೇರೆಯವರಿಗೆ ಟಿಕೆಟ್ ಕೊಟ್ಟರೂ ಬೆಂಬಲ ಸೂಚಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.

ABOUT THE AUTHOR

...view details