ಮಂಗಳೂರು: ಬಿಜೆಪಿ ಪಕ್ಷದಿಂದ ಸೋಮಶೇಖರ್ ರೆಡ್ಡಿ ಅವರನ್ನು ಉಚ್ಛಾಟಿಸಬೇಕು ಎಂದು ಕಾಂಗ್ರೆಸ್ ಮುಖಂಡ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಆಗ್ರಹಿಸಿದ್ದಾರೆ.
ಶಾಸಕ ಸೋಮಶೇಖರ್ ರೆಡ್ಡಿ ನೀಡಿರುವ ಹೇಳಿಕೆಗೆ ನಗರದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಸೋಮಶೇಖರ್ ರೆಡ್ಡಿ ಬಿಜೆಪಿಯ ಅಭಿಪ್ರಾಯ ಹೇಳಿದ್ದಾರೆ. ಒಂದು ವೇಳೆ ಆ ಹೇಳಿಕೆ ಪಕ್ಷದ್ದಲ್ಲ ಎಂದಾದ್ರೆ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಛಾಟಿಸಲಿ. ಪ್ರಧಾನಮಂತ್ರಿ, ಮುಖ್ಯಮಂತ್ರಿ ಕ್ಷಮೆಯಾಚಿಸಲಿ ಎಂದರು.