ಮಂಗಳೂರು:ಮತೀಯ ಗಲಭೆ ಸೃಷ್ಟಿ ಮಾಡುವ, ಸಮಾಜದ ಶಾಂತಿ ಕೆಡಿಸುವ ಉದ್ದೇಶದಿಂದ ಉಳ್ಳಾಲ ತೊಕ್ಕೊಟ್ಟು ಒಳ ಪೇಟೆಯಲ್ಲಿ ನಿನ್ನೆ ದುಷ್ಕರ್ಮಿಗಳು ಮಾಂಸದಂಗಡಿಗೆ ಬೆಂಕಿ ಹಚ್ಚಿದ್ದಾರೆ ಎಂದು ಮಾಜಿ ಮೇಯರ್, ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಆರೋಪಿಸಿದ್ದಾರೆ.
ಮುಸ್ಲಿಂ ಬಾಹುಳ್ಯವಾದ ಮಂಗಳೂರು ವಿಧಾನ ಸಭಾ ಕ್ಷೇತ್ರದಿಂದಲೇ ಮತೀಯ ಉದ್ವಿಗ್ನತೆಗೆ ನಾಂದಿ ಹಾಡುವ ಪ್ರಯತ್ನ ಇದಾಗಿದೆ. ಇತ್ತೀಚೆಗೆ ಕಲ್ಲಡ್ಕ ಪ್ರಭಾಕರ ಭಟ್ಟರ ಪದ ಬಳಕೆ 'ಉಳ್ಳಾಲ ಪಾಕಿಸ್ತಾನ'ದ ಮುಂದುವರಿಕೆಯ ಭಾಗವಾಗಿ ನಿನ್ನೆಯ ಅಂಗಡಿ ಸುಡುವಿಕೆ ಘಟನೆ ನಡೆದಿದೆ. ಈ ದುಷ್ಕೃತ್ಯವನ್ನು ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ ಎಂದರು.