ಕಡಬ(ದಕ್ಷಿಣ ಕನ್ನಡ):ತಾಲೂಕಿನ ರಾಮಕುಂಜ ಎಂಬಲ್ಲಿ ಇತ್ತೀಚೆಗೆ ಎಸ್.ಬಿ.ಐ ಸೇವಾ ಕೇಂದ್ರ, ಮೊಬೈಲ್ ಅಂಗಡಿ, ಕಾಲೇಜು, ಪಂಚಾಯತ್ಗಳಲ್ಲಿ ಕಳ್ಳತನ ನಡೆಸಿದ ಕುಖ್ಯಾತ ಕಳ್ಳನನ್ನು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಂತೆ ಕಡಬ ಎಸ್.ಐ.ರುಕ್ಮ ನಾಯ್ಕ್ ನೇತೃತ್ವದ ತಂಡವು ಬಂಧಿಸಿದೆ.
ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕು ಸಜಿಪನಡು ಪೆರುವ ಮನೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಉಮ್ಮಾರ್ ಫಾರೂಕ್(27) ಎಂದು ಗುರುತಿಸಲಾಗಿದೆ. ಈ ವ್ಯಕ್ತಿಯ ಮೇಲೆ ಕಡಬ ಸೇರಿದಂತೆ ವಿವಿಧ ಠಾಣೆಯಲ್ಲಿ ಒಟ್ಟು 16 ಪ್ರಕರಣಗಳು ದಾಖಲಾಗಿವೆ. ಕಳೆದ ಕೆಲವು ದಿನಗಳಿಂದ ಈತನ ಪತ್ತೆ ಕಾರ್ಯದಲ್ಲಿದ್ದ ಪೊಲೀಸರಿಗೆ, ಆತೂರು ಬಸ್ ನಿಲ್ದಾಣದಲ್ಲಿ ಈತ ಸೆರೆ ಸಿಕ್ಕಿದ್ದಾನೆ. ಈತನಿಂದ ಕಳ್ಳತನಕ್ಕೆ ಬಳಸಿದ ರಾಡ್ ಸೇರಿದಂತೆ ಕೆಲವು ಸಾಮಗ್ರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.