ಕರ್ನಾಟಕ

karnataka

By

Published : Aug 26, 2020, 11:27 PM IST

ETV Bharat / state

ತಿಂಗಳೊಳಗಾಗಿ ಕರ್ನಾಟಕ ಸಂಪೂರ್ಣ ಕೊರೊನಾ ಮುಕ್ತವಾಗಲಿದೆ: ಸಚಿವ ನಾರಾಯಣಗೌಡ

ಮುಂದಿನ ಒಂದು ತಿಂಗಳಲ್ಲಿ ಕರ್ನಾಟಕ ರಾಜ್ಯವು ಸಂಪೂರ್ಣ ಕೊರೊನಾ ಮುಕ್ತ ರಾಜ್ಯವಾಗಲಿದೆ ಎಂದು ರಾಜ್ಯ ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ತಿಳಿಸಿದರು.

Puttur
ಸಭಾ ಕಾರ್ಯಕ್ರಮ

ಪುತ್ತೂರು: ದೇಶವನ್ನು ಗಂಭೀರವಾಗಿ ಕಾಡಿರುವ ಕೊರೊನಾವನ್ನು ತಡೆಯಲು ಬಿಜೆಪಿ ಸರ್ಕಾರವನ್ನು ಹೊರತುಪಡಿಸಿ ಇತರೆ ಯಾವುದೇ ಸರ್ಕಾರಗಳಿಂದ ಖಂಡಿತ ಸಾಧ್ಯವಿರಲಿಲ್ಲ. ಮುಂದಿನ ಒಂದು ತಿಂಗಳೊಳಗಾಗಿ ರಾಜ್ಯವು ಸಂಪೂರ್ಣ ಕೊರೊನಾ ಮುಕ್ತ ರಾಜ್ಯವಾಗಲಿದೆ ಎಂದು ರಾಜ್ಯ ಪೌರಾಡಳಿತ, ರೇಷ್ಮೆ ಹಾಗೂ ತೋಟಗಾರಿಕಾ ಸಚಿವ ಡಾ. ಕೆ.ಸಿ. ನಾರಾಯಣಗೌಡ ತಿಳಿಸಿದರು.

ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ, ನಗರಸಭೆ ಪುತ್ತೂರು ಇವುಗಳ ಸಹಯೋಗದಲ್ಲಿ ನಗರಸಭೆಯ ನೂತನ ಕಚೇರಿ ಕಟ್ಟಡದ ಶಿಲನ್ಯಾಸ, ನವೀಕೃತ ಪುರಭವನ ಹಾಗೂ ಗಾಂಧಿಕಟ್ಟೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನೂತನ ಪುರಸಭಾ ಕಚೇರಿ ಕಟ್ಟಡದ ಶಿಲನ್ಯಾಸ ನೆರವೇರಿಸಿ ಅವರು ಮಾತನಾಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರ್ಕಾರದಿಂದ ರೂ.115 ಕೋಟಿ ರೂ. ಅನುದಾನ ಒದಗಿಸಲಾಗಿದೆ. ರೂ. 15 ಕೋಟಿ ರೂ. ಬಿಡುಗಡೆಗೆ ಸಿದ್ದವಾಗಿದೆ. ಮುಂದೆಯೂ ಶಾಸಕರ ಬೇಡಿಕೆಗೆ ಅನುಗುಣವಾಗಿ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ನವೀಕೃತ ಸಮುದಾಯ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಅಭಿವೃದ್ಧಿ ದೃಷ್ಟಿಯಿಂದ ಸರ್ಕಾರದ ಅನುದಾನದಲ್ಲಿ ನಡೆಯುವ ಕಾಮಗಾರಿಗಳಿಗೆ ವೇಗ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ನಗರಸಭೆಗೆ ಆಡಳಿತ ಮಂಡಳಿ ರಚನೆಗೆ ತೊಡಕಾಗಿರುವ ಲೋಪದೋಷಗಳನ್ನು ಸರಿಪಡಿಸಿ ವಿಧಾನಸಭೆಯಲ್ಲಿ ಮಂಡಿಸಿ ಈಗಾಗಲೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಆದಷ್ಟು ಶೀಘ್ರವೇ ನ್ಯಾಯಾಲಯ ತೀರ್ಪು ನೀಡುವ ಸಾಧ್ಯತೆಗಳಿವೆ. ನ್ಯಾಯಾಲಯದ ತೀರ್ಪು ಬಂದ ತಕ್ಷಣವೇ ಚುನಾಯಿತ ಆಡಳಿತ ಮಂಡಳಿಯನ್ನು ರಚನೆ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಗಾಂಧಿಕಟ್ಟೆ ಲೋಕಾರ್ಪಣೆಗೊಳಿಸಿದ ಮಾತನಾಡಿ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದನಾಗಿ 11 ವರ್ಷಗಳ ನನ್ನ ಅವಧಿಯಲ್ಲಿಯೇ ಈ ಬಾರಿ ಜಿಲ್ಲೆಯಲ್ಲಿ ಅತೀ ವೇಗದ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ ಎಂದರು.

ನಗರಸಭೆಯ ನೂತನ ಕಚೇರಿ ಕಟ್ಟಡದ ಶಿಲನ್ಯಾಸ, ನವೀಕೃತ ಪುರಭವನ ಹಾಗೂ ಗಾಂಧಿಕಟ್ಟೆ ಲೋಕಾರ್ಪಣೆ

ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ವಿಧಾನಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ತಾ.ಪಂ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್, ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ತಹಶೀಲ್ದಾರ್ ರಮೇಶ್ ಬಾಬು ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details