ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಮಂಗಳೂರು ಮೀನುಗಾರರು ಕೇರಳ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ತಪಾಸಣೆಗೆ ಬಂದ ಅಲ್ಲಿನ ಪೊಲೀಸರನ್ನೇ ಅಪಹರಿಸಿಕೊಂಡು ಬಂದಿದ್ದಾರೆ.
19 ಮೀನುಗಾರರಿದ್ದ ಮಂಗಳೂರಿನ ಮೀನುಗಾರಿಕಾ ಬೋಟ್ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಮೀನುಗಾರಿಕೆ ನಡೆಸುತ್ತಿತ್ತು. ಈ ವೇಳೆ, ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಕರಾವಳಿ ಕಾವಲು ಪಡೆಯ ಪೊಲೀಸರು ಈ ಬೋಟ್ ಅಡ್ಡಗಟ್ಟಿದ್ದರು. ಸಿಬ್ಬಂದಿಗಳಾದ ರಘು ಮತ್ತು ಸುಧೀಶ್ ಎಂಬುವರು ಬೋಟ್ ಗೆ ಪ್ರವೇಶಿಸಿದ್ದರು.