ಸುಳ್ಯ (ದಕ್ಷಿಣ ಕನ್ನಡ): ಸುಬ್ರಹ್ಮಣ್ಯ ರಬ್ಬರ್ ನಿಗಮದಲ್ಲಿ ರಬ್ಬರ್ ಮರಗಳಿಗೆ ಔಷಧ ಸಿಂಪಡಣೆಯಲ್ಲಿ ಅವ್ಯವಹಾರ ನಡೆದಿರುವ ಕುರಿತಂತೆ ಮಾಹಿತಿ ನೀಡಿದ್ದಾರೆಂಬ ಕಾರಣದಿಂದಾಗಿ ಕಾರ್ಮಿಕರನ್ನೇ ಕೆಲಸದಿಂದ ವಜಾ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಎಸ್ ಅಂಗಾರ ಅವರ ನೇತೃತ್ವದಲ್ಲಿ ಐತ್ತೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಿತು.
ಸಭೆಯಲ್ಲಿ ಕಾರ್ಮಿಕರು ಅರಣ್ಯ ನಿಗಮದಲ್ಲಿ ನಡೆದ ಬೆಳವಣಿಗೆಯನ್ನು ವಿವರಿಸಿದರು. ಈ ಕುರಿತು ಶಾಸಕ ಎಸ್. ಅಂಗಾರ ಅವರು ಮಾತನಾಡಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚು ಚರ್ಚೆ ಬೇಡ. ಈ ಬಗ್ಗೆ ಇಲಾಖೆಯ ಮೇಲಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಧಿಕಾರಿಗಳಿಂದ ಉತ್ತರ ಇನ್ನಷ್ಟೇ ಬರಬೇಕಿದೆ ಎಂದರು.