ಮಂಗಳೂರು: ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರಿ ಭೂಕುಸಿತ ಹಾಗೂ ಮರಗಳು ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಚಾರ್ಮಾಡಿ ಘಾಟ್ನಲ್ಲಿ ಎಲ್ಲಾ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ವಾಹನ ಸಂಚಾರಕ್ಕೆ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಚಾರ್ಮಾಡಿ ಘಾಟ್ನಲ್ಲಿ ಭೂ ಕುಸಿತ: ಬದಲಿ ವಾಹನ ಸಂಚಾರ ವ್ಯವಸ್ಥೆ - Mangaloru latest news
ಆ.7 ಸಂಜೆ 6ರಿಂದ ಆ.11ರ ಮಧ್ಯರಾತ್ರಿ 12 ರವರೆಗೆ ಚಾರ್ಮಾಡಿ ಘಾಟ್ನಲ್ಲಿ ಎಲ್ಲಾ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಲಾಗಿದೆ.

ಚಾರ್ಮಾಡಿ ಘಾಟ್ನಲ್ಲಿ ಭೂಕುಸಿತ
ಆ.7 ಸಂಜೆ 6ರಿಂದ ಆ.11ರ ಮಧ್ಯರಾತ್ರಿ 12 ರವರೆಗೆ ಚಾರ್ಮಾಡಿ ಘಾಟ್ನಲ್ಲಿ ಎಲ್ಲಾ ವಾಹನ ಸಂಚಾರವನ್ನು ನಿರ್ಬಂಧಿಸಿ ಆದೇಶಿಸಲಾಗಿದೆ. ಆದ್ದರಿಂದ ಎಲ್ಲಾ ವಾಹನಗಳಿಗೆ ಬದಲಿ ರಸ್ತೆಯಲ್ಲಿ ಸಂಚಾರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ವಾಹನಗಳು ಉಜಿರೆ-ಧರ್ಮಸ್ಥಳ-ಕೊಕ್ಕಡ-ಗುಂಡ್ಯ-ಶಿರಾಡಿ (ರಾಷ್ಟ್ರೀಯ ಹೆದ್ದಾರಿ 75) ಮುಖಾಂತರ ಸಂಚರಿಸಬಹುದಾಗಿದೆ. ಅಲ್ಲದೆ ಮೂಡುಗೆರೆ ಹ್ಯಾಂಡ್ ಪೋಸ್ಟ್- ಜನ್ನಾಪುರ-ಆನೆಮಹಲ್-ಶಿರಾಡಿ-ಗುಂಡ್ಯ ಮುಖಾಂತರ ಸಂಚರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ.
ಚಾರ್ಮಾಡಿ ಘಾಟ್ನಲ್ಲಿ ಭೂ ಕುಸಿತ
Last Updated : Aug 8, 2020, 11:10 PM IST