ಮಂಗಳೂರು:ಡ್ರಗ್ಸ್ ದಂಧೆಯ ಬಗ್ಗೆ ಎಲ್ಲ ರೀತಿಯ ಆಯಾಮಗಳಲ್ಲೂ ವಿಚಾರಣೆ, ತನಿಖೆ ನಡೆಸಲಾಗುತ್ತಿದೆ. ಈ ಸಂದರ್ಭ ಯಾರಾದರೂ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ಬಗ್ಗೆ ನಮಗೆ ತಿಳಿದು ಬಂದಲ್ಲಿ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹೇಳಿದರು.
ಕಿಶೋರ್ ಅಮನ್ ಶೆಟ್ಟಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ನಿರೂಪಕಿ ಅನುಶ್ರೀ ಅವರ ವಿಚಾರಣೆ ನಡೆಸಬೇಕಾಗಿವುದರಿಂದ ತನಿಖಾಧಿಕಾರಿಯವರು ಇಂದು ಅವರ ವಿಚಾರಣೆಯನ್ನು ನಡೆಸಿದ್ದಾರೆ. ವಿಚಾರಣೆ ನಡೆಸಿದ ಸಂದರ್ಭದಲ್ಲಿ ಯಾವ ಪ್ರಶ್ನೆಗಳನ್ನು ಕೇಳಲಾಗಿದೆ, ಅವರೇನು ಉತ್ತರ ನೀಡಿದ್ದಾರೆ ಅನ್ನೋದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ ಎಂದು ಹೇಳಿದರು.