ಕರ್ನಾಟಕ

karnataka

ETV Bharat / state

ಉರುಳಿಗೆ ಬಿದ್ದ ಚಿರತೆ: ಪಿಲಿಕುಳಕ್ಕೆ ಹಸ್ತಾಂತರಿಸುವಾಗ ಮಾರ್ಗಮಧ್ಯೆ ಸಾವು - ಉರುಳಿಗೆ ಬಿದ್ದ ಚಿರತೆಯ ರಕ್ಷಣೆ

ಅಲ್ಲಿಪಾದೆ ಸಮೀಪದ ದೇವಸ್ಯಪಡೂರು ಗ್ರಾಮದ ಬೀಜಪ್ಪಾಡಿ ಸಮೀಪ ಕಾಡಿನಲ್ಲಿಟ್ಟಿದ್ದ ಉರುಳಿಗೆ ಸಿಕ್ಕಿ ಹಾಕಿಕೊಂಡಿದ್ದ ಚಿರತೆಯನ್ನು ಅರಣ್ಯ ಅಧಿಕಾರಿಗಳು ಮತ್ತು ಸ್ಥಳೀಯರು ರಕ್ಷಿಸಿದ್ದು, ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದೆ.

Leopard protection
ಉರುಳಿಗೆ ಬಿದ್ದ ಚಿರತೆಯ ರಕ್ಷಣೆ

By

Published : Mar 22, 2022, 7:30 PM IST

ಬಂಟ್ವಾಳ:ಉರುಳಿಗೆ ಬಿದ್ದು ಜೀವನ್ಮರಣ ಹೋರಾಟದಲ್ಲಿದ್ದ ಚಿರತೆಯನ್ನು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಸ್ಥಳೀಯರ ಸಹಕಾರದೊಂದಿಗೆ ರಕ್ಷಿಸಿದ್ದರು. ಆದರೆ, ಪಿಲಿಕುಳಕ್ಕೆ ಹಸ್ತಾಂತರ ಮಾಡುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದೆ. ಅಲ್ಲಿಪಾದೆ ಸಮೀಪದ ದೇವಸ್ಯಪಡೂರು ಬೀಜಪ್ಪಾಡಿ ಎಂಬಲ್ಲಿ ಚಿರತೆ ಉರುಳಿಗೆ ಬಿದ್ದಿತ್ತು.

ಸುಮಾರು 6 ವರ್ಷದ ಗಂಡು ಚಿರತೆಯೊಂದು ಉರುಳಿಗೆ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ನೇತೃತ್ವದ ತಂಡ ರಾತ್ರಿ 9 ಗಂಟೆಯಿಂದ ಮುಂಜಾನೆ 4 ಗಂಟೆಯವರೆಗೆ ಕಾರ್ಯಾಚರಣೆ ನಡೆಸಿ ಚಿರತೆ ರಕ್ಷಣೆ ಮಾಡಿದ್ದಾರೆ. ರಕ್ಷಿಸಿದ ಚಿರತೆಯನ್ನು ಪಿಲಿಕುಳ ನಿಸರ್ಗಧಾಮಕ್ಕೆ ಹಸ್ತಾಂತರಿಸಲು ತೆರಳುತ್ತಿದ್ದಾಗ ಮಾರ್ಗಮಧ್ಯೆ ಅನಾರೋಗ್ಯದಿಂದ ಮೃತಪಟ್ಟಿದೆ.

ಇದನ್ನೂ ಓದಿ:ಮೈಸೂರು ವಿವಿ ಘಟಿಕೋತ್ಸವ : ಪುನೀತ್​ಗೆ ಮರಣೋತ್ತರ ಗೌರವ ಡಾಕ್ಟರೇಟ್​ ಪ್ರದಾನ

ABOUT THE AUTHOR

...view details