ಕರ್ನಾಟಕ

karnataka

2 ಸಾವಿರಕ್ಕೂ ಅಧಿಕ ಕುರ್ಚಿ ತುಂಬಿದ್ದ ಲಾರಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

By

Published : Jan 13, 2020, 2:50 PM IST

ಎನ್ಆರ್​ಸಿ, ಸಿಎಎ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಗೆ ಬಳಸಿದ್ದ ಕುರ್ಚಿ ಹಾಗೂ ವಾಹನ ಇದಾಗಿದ್ದು, ಮಧ್ಯರಾತ್ರಿ 2:30 ಸುಮಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

lorry and chairs burn in mangalore
ವಾಹನಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಮಂಗಳೂರು:ನಗರದ ಹೊರವಲಯದಲ್ಲಿರುವ ದೇರಳಕಟ್ಟೆಯಲ್ಲಿ 2 ಸಾವಿರಕ್ಕೂ ಅಧಿಕ ಕುರ್ಚಿಗಳು ತುಂಬಿದ್ದ ಲಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.

ವಾಹನಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಎನ್ಆರ್​ಸಿ, ಸಿಎಎ ಕಾಯ್ದೆ ವಿರೋಧಿಸಿ ನಡೆಸಿದ ಪ್ರತಿಭಟನೆಗೆ ಬಳಸಿದ್ದ ಕುರ್ಚಿ ಹಾಗೂ ವಾಹನ ಇದಾಗಿದ್ದು, ಮಧ್ಯರಾತ್ರಿ 2:30 ಸುಮಾರಿಗೆ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.

ದೇರಳಕಟ್ಟೆಯಲ್ಲಿ ಎನ್ಆರ್​ಸಿ, ಸಿಎಎ ಕಾಯ್ದೆ ವಿರೋಧಿಸಿ ನಿನ್ನೆ (ಜ. 12) ಸಂಜೆ ದೇರಳಕಟ್ಟೆ ಪೌರತ್ವ ಸಂರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿತ್ತು. ಬಳಿಕ‌ ಅಲ್ಲಿ ಬಳಸಲಾಗಿದ್ದ ಕುರ್ಚಿಗಳನ್ನು ಲಾರಿಗೆ ತುಂಬಿಸಲಾಗಿತ್ತು‌. ಆದರೆ, ಇಂದು ಬೆಳಗ್ಗೆ ವಾಹನ ಸಂಪೂರ್ಣ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details