ಕರ್ನಾಟಕ

karnataka

ETV Bharat / state

ಕಾರು-ಲಾರಿ ನಡುವೆ ಭೀಕರ ರಸ್ತೆ ಅಪಘಾತ.. ಸುಳ್ಯ ಬಳಿ ನಾಲ್ವರ ದುರ್ಮರಣ.. - adkar accident

ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಸಮೀಪದ ಅಡ್ಕಾರ್‌ ಎಂಬಲ್ಲಿ ಸಂಭವಿಸಿದೆ.

ಅಪಘಾತ

By

Published : Oct 1, 2019, 5:12 PM IST

Updated : Oct 1, 2019, 9:17 PM IST

ಸುಳ್ಯ/ಮಂಗಳೂರು:ಕಾರು ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸುಳ್ಯ ಸಮೀಪದ ಅಡ್ಕಾರ್ ಎಂಬಲ್ಲಿ ಸಂಭವಿಸಿದೆ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲ್ಸೂರು ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಅಪಘಾತ ನಡೆದಿದೆ. ಮಡಿಕೇರಿ ಮೂಲದ ತಂದೆ ಹಾಗೂ ಮೂವರು ಮಕ್ಕಳೆಂದು ಗುರುತಿಸಲಾಗಿದೆ.ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು (KA-12-MA-4587) ಮತ್ತು ಸುಳ್ಯದಿಂದ ಮಂಗಳೂರು ಕಡೆಗೆ ಬರುತ್ತಿದ್ದ ಈಚರ್ ಲಾರಿ (KA-19-AA-9103 ) ಮಧ್ಯೆ ಸುಳ್ಯದ ಅಡ್ಕಾರ್ ಸಮೀಪದ ಮಾವಿನಕಟ್ಟೆ ಎಂಬಲ್ಲಿ ಅಪಘಾತ ಸಂಭವಿಸಿದೆ.

ಕಾರು-ಲಾರಿ ನಡುವೆ ಅಪಘಾತ

ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಡಿಕೇರಿ ನಾಪೋಕ್ಲು ಕೊಟ್ಟಮುಡಿ ಎಂಬಲ್ಲಿನ ಹಸೈನಾರ್ ಹಾಜಿ ಹಾಗೂ ಅವರ ಮಕ್ಕಳಾದ ಇಬ್ರಾಹಿಂ, ಅಬ್ದುಲ್ ರಹಿಮಾನ್ ಮತ್ತು ಹ್ಯಾರೀಸ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರ ಜೊತೆ ಪ್ರಯಾಣಿಸುತ್ತಿದ್ದ ಉಮ್ಮರ್ ಫಾರೂಕ್ ಎಂಬುವರಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಸುಳ್ಯ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Oct 1, 2019, 9:17 PM IST

ABOUT THE AUTHOR

...view details